ಹಾಸನ : ಹಾರಂಗಿ ಜಲಾಶಯದಿಂದ ಜು.31 ರಿಂದ ನಾಲೆಗಳಿಗೆ ನೀರು ಬಿಡಲಾಗುತ್ತಿದ್ದು, ನೀರು ಬಿಡುಗಡೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮುಡಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಣನೂರು ಭಾಗದ ಕೆರೆಗಳ ಭರ್ತಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಿಡಲಾಗುತ್ತಿದೆ. ಈ ಬಗ್ಗೆ ಆಹಾರ ನಾಗರಿಕ ಸರಬರಾಜು ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ರೈತರು ಈ ನೀರನ್ನು ಕೃಷಿ ಚಟುವಟಿಕೆಗಳಿಗಾಗಿ ಸದುಪಯೋಗ ಪಡೆಸಿಕೊಳ್ಳುವಂತೆ ಸಚಿವರು ಮನವಿ ಮಾಡಿಕೊಂಡಿದ್ದಾರೆ.
ಸ್ಪೀಕರ್ ಪದಚ್ಯುತಿ ನೋಟಿಸ್ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....








