ನಾವೇಲ್ಲರೂ ಒಂದೇ ಎಂಬ ಭಾವನೆ ನಮ್ಮಲ್ಲಿ | ಜಾತಿಗಳ ಒಳ ಸಂಘರ್ಷಗಳು ನಡೆಯಬಾರದು : ಯದುವೀರ್ ಒಡೆಯರ್
ಆನೇಕಲ್: ಇತ್ತೀಚಿಗೆ ರಾಜ್ಯದಲ್ಲಿ ನಡೆದಂತಹ ಘಟನೆಗಳು ಇನ್ನೂ ಮುಂದೆ ನಡೆಯಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ್ಯ ಸರಕಾರಕ್ಕೆ ಸೂಚಿಸಿದ್ದಾರೆ.
ಆನೇಕಲ್ ಪಟ್ಟಣದ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ರಾಜಮುಡಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿಗೆ ರಾಜ್ಯದಲ್ಲಿ ನಡೆದ ಘಟನೆಗಳಿಂದ ನೋವು ತರಿಸಿದೆ. ನಾವೇಲ್ಲರೂ ಒಂದೇ ಎಂಬ ಭಾವನೆ ನಮ್ಮಲ್ಲಿ ಮೂಡಬೇಕು. ಜಾತಿಗಳ ಒಳ ಸಂಘರ್ಷಗಳು ನಡೆಯಬಾರದು. ಇನ್ನೂಮುಂದೆ ಈ ರೀತಿ ನಡೆಯದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಅಲ್ಲದೇ ಈ ಬಗ್ಗೆ ಈಗಾಗಲೇ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಹೇಳಿದ್ದಾರೆ. ಹಾಗೇ ಯಾವುದೇ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಒಂದೇ ಎಂಬಮನೋಭಾವದಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
ಇನ್ನೂ ಆನೇಕಲ್ ಹಾಗೂ ಮೈಸೂರಿಗೆ ಈ ಹಿಂದೆ ಸಂಬಂಧ ಇತ್ತು ಎನ್ನುವ ಮಾಹಿತಿ ತಿಳಿದು ಬಂದಿದೆ. ಇದರಿಂದಾಗಿ ಆನೇಕಲ್ ಪಟ್ಟಣದ ಶ್ರೀ ತಿಮ್ಮರಾಯ ಸ್ವಾಮಿ ದೇವಾಲಯದಲ್ಲಿ ರಾಜಮುಡಿ ಉತ್ಸವವನ್ನು ಹಮ್ಮಿಕೊಂಡು ಆಹ್ವಾನ ನೀಡಿದ್ದಾರೆ. ನಾನು ತುಂಬಾ ಸಂತೋಷದಿಂದ ಇಲ್ಲಿಗೆ ಆಗಮಿಸಿ ಪೂಜೆಯಲ್ಲಿ ಭಾಗವಹಿಸಿದ್ದು ತುಂಬಾ ಸಂತೋಷ ತಂದಿದೆ ಎಂದರು.