ಕೇಸ್ ಗಳಿಗೆಲ್ಲ ನಾವು ಹೆದರುವುದಿಲ್ಲ : ಸಿದ್ದರಾಮಯ್ಯ
ಬೆಂಗಳೂರು : ನಾನು ಸೇರಿದಂತೆ ಪಕ್ಷದ 30 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಂತಹ ಕೇಸ್ಗಳಿಗೆಲ್ಲ ನಾವು ಹೆದರುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕೇಸ್ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.
ಈ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಕಾಂಗ್ರೆಸ್ ಪಕ್ಷ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ.
ಹೀಗಾಗಿ ಕಾಂಗ್ರೆಸ್ ನಾಯಕರ ವಿರುದ್ಧ 3ನೇ ಕೇಸು ದಾಖಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಇತರ 63 ಮಂದಿ ಕಾಂಗ್ರೆಸ್ ನಾಯಕರು, ಪಾದಯಾತ್ರೆಯಲ್ಲಿ ಭಾಗವಹಿಸಿದವರ ವಿರುದ್ಧ ರಾಮನಗರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕನಕಪುರ ಠಾಣೆಯಲ್ಲಿ ಮೂರನೇ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಸೇರಿದಂತೆ ಪಕ್ಷದ 30 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಇಂತಹ ಕೇಸ್ಗಳಿಗೆಲ್ಲ ನಾವು ಹೆದರುವುದಿಲ್ಲ. ಕೊರೊನಾ ನಿಯಮ ಉಲ್ಲಂಘಿಸಿದ ಮುಖ್ಯಮಂತ್ರಿಗಳು ಸೇರಿ ಬಿಜೆಪಿಯವರ ಮೇಲೂ ಏಕೆ ಪ್ರಕರಣ ದಾಖಲಿಸಿಲ್ಲ?
ಇದರಿಂದ ಸರ್ಕಾರದ ದುರುದ್ದೇಶ ಸ್ಪಷ್ಟವಾಗುತ್ತದೆ. ಅದರೆ ನಮ್ಮ ಪಾದಯಾತ್ರೆ ತಡೆಯಲು ಅವರಿಂದ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.