ಬೀದರ್: ನಮ್ಮಲ್ಲಿ ಸಿಎಂ ಹುದ್ದೆ ಖಾಲಿಯೇ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಗುಡುಗಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ ಎಂದು ಬಿಜೆಪಿಯವರು ಸುಮ್ಮನೆ ಆರೋಪಿಸುತ್ತಿದ್ದಾರೆ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ವಿರೋಧ ಪಕ್ಷದ ಸ್ಥಾನ ಖಾಲಿ ಇದೆ. ಆ ಸ್ಥಾನಕ್ಕಾಗಿ ವಿಪಕ್ಷಗಳು ಕಿತ್ತಾಡುತ್ತಿವೆಯೇ ಹೊರತಾಗಿ ನಾವು ಕಿತ್ತಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಮಧ್ಯಪ್ರದೇಶದಲ್ಲಿ ಒಂದು ಮೊಬೈಲ್ನಿಂದ 7 ಲಕ್ಷ ಜನರು ಅದರ ಸದುಪಯೋಗ ಪಡೆದಿದ್ದಾರೆ. ಕತಾರ್ ನಲ್ಲಿ ಮಾಜಿ ನೌಕಾಪಡೆಯ 8 ಜನ ಅಧಿಕಾರಿಗಳನ್ನು ಗಲ್ಲಿಗೇರಿಸಲಾಗಿದೆ. ಆದರೆ, ಇದರ ಬಗ್ಗೆ ಪ್ರಧಾನಿ ಮಾತನಾಡಬೇಕಲ್ಲವೇ?ಅವರ ಸಾಧನೆ ಬಗ್ಗೆ ಮಾತನಾಡುತ್ತಾರೆ. ರಾಜ್ಯ ಸರ್ಕಾರದ ಕುರಿತು ಟೀಕೆ ಮಾಡಿದರೆ ಇವರಿಗೇ ಏನು ಸಿಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಕಾಪಿ ಮಾಡಿದ್ದು ಎಲ್ಲಾ ಕಾರ್ಯಕ್ರಮಗಳ ಹೆಸರು ಬದಲಾವಣೆ ಮಾಡಿ 70 ವರ್ಷದ ನಮ್ಮ ಯೋಜನೆ ಜಾರಿ ಮಾಡಿದ್ದಾರೆ. ರಾಜ್ಯದಲ್ಲಿ ಬರ ಬಂದಿದೆ. ಅದಾನಿಗೂ ಸಾಲ ಕೊಡುತ್ತಾರೆ. ನಮಗೆ ಕೊಡೋಕೆ ಹಣ ಇಲ್ವಾ ಎಂದು ಪ್ರಶ್ನಿಸಿದ್ದಾರೆ.