ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

“ಬಳ್ಳಾರಿ, ಹಾಸನ ಮುಗಿಸಿದ್ದೇವೆ, ಮುಂದಿನ ಗುರಿ ಧರ್ಮಸ್ಥಳ”: ಮಾಜಿ ಸಂಸದೆ ಸುಭಾಷಿಣಿ ಅಲಿ ಸ್ಫೋಟಕ ಹೇಳಿಕೆ, ‘ರೆಡ್ ಅಲರ್ಟ್’ ಘೋಷಣೆಗೆ ಆಗ್ರಹ

"We have completed Bellary and Hassan, the next target is Dharmasthala": Former MP Subhashini Ali's explosive statement

Shwetha by Shwetha
September 27, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: “ಧರ್ಮಸ್ಥಳ ಒಂದು ಅತಿ ಕೆಟ್ಟ ಸ್ಥಳವಾಗಿದ್ದು, ರಾಜ್ಯ ಸರ್ಕಾರವು ತಕ್ಷಣವೇ ಆ ಪ್ರದೇಶವನ್ನು ‘ರೆಡ್ ಅಲರ್ಟ್’ ಎಂದು ಘೋಷಿಸಬೇಕು,” ಎಂದು ಮಾಜಿ ಸಂಸದೆ ಮತ್ತು ಎಡಪಂಥೀಯ ನಾಯಕಿ ಸುಭಾಷಿಣಿ ಅಲಿ ತೀವ್ರ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ನಾವು ಬಳ್ಳಾರಿಯನ್ನು ಮುಗಿಸಿದ್ದೇವೆ, ಹಾಸನವನ್ನು ಮುಗಿಸಿದ್ದೇವೆ, ನಮ್ಮ ಮುಂದಿನ ಗುರಿ ಧರ್ಮಸ್ಥಳ,” ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

“ಧರ್ಮಸ್ಥಳದಲ್ಲಿ ಮನುವಾದಿ ವ್ಯವಸ್ಥೆ ಇದೆ”

Related posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

July 12, 2026

ಧರ್ಮಸ್ಥಳದಲ್ಲಿ ಮನುವಾದಿ ವ್ಯವಸ್ಥೆ ಬೇರೂರಿದೆ ಎಂದು ಆರೋಪಿಸಿದ ಸುಭಾಷಿಣಿ ಅಲಿ, “ಈ ಮನುವಾದವನ್ನು ಭಾರತದಿಂದಲೇ ಓಡಿಸಬೇಕಿದೆ. ಧರ್ಮಸ್ಥಳದಲ್ಲಿ ಹಣದ ಬಲ, ತೋಳ್ಬಲ ಮತ್ತು ಜನಬಲವನ್ನು ಬಳಸಿಕೊಂಡು ಅಮಾಯಕರ ಮೇಲೆ, ವಿಶೇಷವಾಗಿ ದಲಿತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಅವರ ಜಮೀನುಗಳನ್ನು ಕಬಳಿಸಲಾಗುತ್ತಿದೆ. ಯಾರಾದರೂ ಇದನ್ನು ಪ್ರಶ್ನಿಸಿ ತಿರುಗಿಬಿದ್ದರೆ, ಅವರನ್ನು ಮುಗಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಆದರೆ, ಅಲ್ಲಿನ ದಲಿತರ ಪರವಾಗಿ ಎಡಪಂಥೀಯ ಸಂಘಟನೆಗಳು ನಿಂತು ನ್ಯಾಯಕ್ಕಾಗಿ ಹೋರಾಡುತ್ತಿವೆ,” ಎಂದು ಹೇಳಿದರು.

ಹಲವು ಪ್ರಕರಣಗಳನ್ನು ಉಲ್ಲೇಖಿಸಿ ವಾಗ್ದಾಳಿ

ಹಲವು ಪ್ರಕರಣಗಳನ್ನು ಉಲ್ಲೇಖಿಸಿದ ಅವರು, “ಪದ್ಮಲತಾ, ವೇದವಲ್ಲಿ ಮತ್ತು ಸೌಜನ್ಯ ಅವರಂತಹ ಹೆಣ್ಣುಮಕ್ಕಳಿಗೆ ಅನ್ಯಾಯವಾಗಿದೆ. ಇದು 50-60 ವರ್ಷಗಳ ಹಿಂದಿನ ಕಥೆಯಲ್ಲ, ಇಂದಿನ ವಾಸ್ತವ. ಧರ್ಮಸ್ಥಳದಲ್ಲಿ ಇನ್ನು ಮುಂದೆ ಅಧರ್ಮ ನಡೆಯಲು ನಾವು ಬಿಡುವುದಿಲ್ಲ. ಇದರ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡಬೇಕಿದೆ,” ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರದ ವಿರುದ್ಧವೂ ಆರೋಪ

“ಧರ್ಮಸ್ಥಳದವರು ಭಕ್ತರಿಂದ ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನಾಭರಣಗಳನ್ನು ಸಂಗ್ರಹಿಸುತ್ತಿದ್ದಾರೆ. ಇಂತಹ ವ್ಯವಸ್ಥೆಗಳಿಗೆ ಈಗಿನ ಕೇಂದ್ರ ಸರ್ಕಾರ ಕೂಡ ಬೆಂಬಲವಾಗಿ ನಿಂತಿದೆ,” ಎಂದು ಸುಭಾಷಿಣಿ ಅಲಿ ಗಂಭೀರ ಆರೋಪ ಮಾಡಿದರು. “ಎಂ.ಎಂ. ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಹತ್ಯೆಗಳನ್ನು ಯಾರೂ ಮರೆಯಬಾರದು. ಇದೆಲ್ಲವೂ ಮನುವಾದವನ್ನು ಸ್ಥಾಪಿಸಲು ನಡೆದ ಹತ್ಯೆಗಳು. ಮಹಿಳೆಯರು ಹತ್ಯೆಗೊಳಗಾಗುತ್ತಿದ್ದಾರೆ, ಆದರೆ ಅವರು ಹೇಗೆ ಸಾವನ್ನಪ್ಪಿದರು ಎನ್ನುವುದೇ ತಿಳಿಯದಂತೆ ಮಾಡಲಾಗುತ್ತಿದೆ. ಇಂತಹ ಕೃತ್ಯಗಳನ್ನು ಮಾಡುವ ಅಪರಾಧಿಗಳನ್ನು ಸುಮ್ಮನೆ ಬಿಡಬಾರದು,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ನಿಷ್ಕ್ರಿಯತೆ ಮತ್ತು ‘ರೆಡ್ ಅಲರ್ಟ್’ಗೆ ಆಗ್ರಹ

“ಧರ್ಮಸ್ಥಳದಲ್ಲಿ ಶವಗಳು ಪತ್ತೆಯಾಗಿವೆ. ಅಲ್ಲಿ ನಡೆಯುತ್ತಿರುವ ಹತ್ಯೆಗಳು ಮತ್ತು ನಾಪತ್ತೆ ಪ್ರಕರಣಗಳ ಬಗ್ಗೆ ಪೊಲೀಸರಿಗೆ ಮತ್ತು ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಇದೆ. ಆದರೂ, ಏನೂ ಗೊತ್ತಿಲ್ಲದವರಂತೆ ಎಲ್ಲರೂ ಸುಮ್ಮನಿದ್ದಾರೆ. ಧರ್ಮಸ್ಥಳವು ಅತ್ಯಂತ ಅಪಾಯಕಾರಿ ಮತ್ತು ಕೆಟ್ಟ ಪ್ರದೇಶವಾಗಿ ಮಾರ್ಪಟ್ಟಿದೆ. ಆದ್ದರಿಂದ, ರಾಜ್ಯ ಸರ್ಕಾರವು ತಕ್ಷಣವೇ ‘ಧರ್ಮಸ್ಥಳವನ್ನು ರೆಡ್ ಅಲರ್ಟ್’ ಎಂದು ಘೋಷಿಸಬೇಕು,” ಎಂದು ಅವರು ಬಲವಾಗಿ ಒತ್ತಾಯಿಸಿದರು.

ShareTweetSendShare
Join us on:

Related Posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram