ನವದೆಹಲಿ: ಕೇಂದ್ರ ಬಜೆಟ್ನಲ್ಲಿ (Union Budget 2024) ಯಾವ ರಾಜ್ಯಗಳನ್ನೂ ಕಡೆಗಣಿಸಿಲ್ಲ. ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸ್ಪಷ್ಟಪಡಿಸಿದ್ದಾರೆ.
ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ನಲ್ಲಿ ಕೇವಲ ಆಂಧ್ರ ಪ್ರದೇಶ (Andhra Pradesh) ಮತ್ತು ಬಿಹಾರ (Bihar) ರಾಜ್ಯಗಳನ್ನು ಮಾತ್ರ ಪರಿಗಣಿಸಿ, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂಬ ವಿಪಕ್ಷಗಳ ಟೀಕೆ ನ್ಯಾಯಸಮ್ಮತವಾಗಿದ್ದಲ್ಲ. ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. 2014 ರಲ್ಲಿ ಆಂಧ್ರಪ್ರದೇಶವನ್ನು ವಿಭಜಿಸಿದ ನಂತರ ಕೇಂದ್ರವು ಕಾನೂನಿನ ಪ್ರಕಾರ ಆಂಧ್ರಪ್ರದೇಶವನ್ನ ಬೆಂಬಲಿಸುವ ಅಗತ್ಯವಿದೆ. ಬಜೆಟ್ನಲ್ಲಿ ಎಲ್ಲಾ ರಾಜ್ಯಗಳು ಹಿಂದಿನಂತೆ ಹಂಚಿಕೆ ಸ್ವೀಕರಿಸಿವೆ ಎಂದು ಹೇಳಿದ್ದಾರೆ.
ಹಿಂದುಳಿದ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರದ ಬೆಂಬಲ ಬಯಸಿದೆ. ನಾವೂ ಸಹ ಹೊಸ ರಾಜಧಾನಿ ನಿರ್ಮಾಣವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ. ಸಮಗ್ರ ಪ್ಯಾಕೇಜ್ ಒದಗಿಸಿದೆ. ಅಸ್ತಿತ್ವದಲ್ಲಿರುವ ನಗರಗಳನ್ನು ಹೆಚ್ಚು ವಾಸಕ್ಕೆ ಯೋಗ್ಯ ಮತ್ತು ಫ್ಯೂಚರಿಸ್ಟಿಕ್ ಮಾಡಲು ನಾವು ತಂತ್ರಜ್ಞಾನ ಮತ್ತು ನವೀನ ನಗರ ಯೋಜನೆಗಳ ಮೇಲೆ ಕೇಂದ್ರೀಕರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.








