‘ಬಾಂಬ್ ಹಾಕಲು ಸೈನಿಕರಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ನೀಡಿದ ಹೇಳಿಕೆಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರೂ ಹೇಳ್ತಾರೆ ಅಂತಾ ಯುದ್ಧ ಮಾಡೋಕೆ ಸಾಧ್ಯವಿಲ್ಲ. ಯುದ್ಧ ಎಂಬುದು ಕೇವಲ ಮಾತಿನಿಂದ ನಡೆಯುವುದು ಅಲ್ಲ. ಪಹಲ್ಗಾಮ್ ಸಮಸ್ಯೆಯ ಪ್ರತೀಕಾರ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಒಳಪಟ್ಟದ್ದು. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ, ಎಂದು ಹೇಳಿದ್ದಾರೆ.
ಇತ್ತೀಚೆಗೆ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಜಮೀರ್ ಪಾಕಿಸ್ತಾನ ಯಾವಾಗಲೂ ನಮ್ಮ ಶತ್ರು. ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರ್ಕಾರ ನನಗೆ ಅವಕಾಶ ನೀಡಿದರೆ, ನಾನು ಯುದ್ಧಕ್ಕಾಗಿ ಪಾಕಿಸ್ತಾನಕ್ಕೆ ಹೋಗಲು ಸಿದ್ಧನಿದ್ದೇನೆ. ನನಗೆ ಆತ್ಮಾಹುತಿ ಬಾಂಬ್ ನೀಡಲಿ, ನಾನು ಅದನ್ನು ನನ್ನ ದೇಹಕ್ಕೆ ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಿ ಅವರ ಮೇಲೆ ದಾಳಿ ಮಾಡುತ್ತೇನೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ ಯುದ್ಧವು ತೀವ್ರ ಗಂಭೀರ ವಿಷಯ. ಇದಕ್ಕೆ ರಾಜಕೀಯ ಮುಖಂಡರು ಮಾತನಾಡಿದಂತೆ ತಕ್ಷಣ ನಿರ್ಧಾರ ಮಾಡಲಾಗದು. ಕೇಂದ್ರ ಸರ್ಕಾರವು ಈ ಬಗ್ಗೆ ಸೂಕ್ತ ಮಾಹಿತಿ ಹೊಂದಿದ್ದು, ಸೂಕ್ತ ಸಮಯಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದು ಅವರ ಹೊಣೆಗಾರಿಕೆ ಎಂದು ಅವರು ಹೇಳಿದರು.
ಬಾಂಬ್ ಹಾಕಲು ಸೈನಿಕರಿದ್ದಾರೆ. ಎಲ್ಲರೂ ಹೇಳ್ತಾರೆ ಹಾಗಂತ ಹೋಗಿ ಯುದ್ಧ ಮಾಡೋಕೆ ಆಗಲ್ಲ. ಕಾಂಗ್ರೆಸ್ನವರು ಹೋಗಲ್ಲ, ಬಿಜೆಪಿಯವರು ಹೋಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಪಹಲ್ಲಾಮ್ ಪ್ರತೀಕಾರ ಕೇಂದ್ರಕ್ಕೆ ಬಿಟ್ಟಿದ್ದು, ಕೇಂದ್ರ ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ. ಬಾಂಬ್ ಹಾಕಲು ಸೈನಿಕರಿದ್ದಾರೆ. ಎಲ್ಲರು ಹೇಳ್ತಾರೆ ಹಾಗಂತ ಹೋಗಿ ಯುದ್ಧ ಮಾಡೋಕೆ ಆಗಲ್ಲ ಎಂದು ಅವರು ಹೇಳಿದರು.