Kempanna | ಮತ್ತೆ ಬಿರುಗಾಳಿ ಎಬ್ಬಿಸಿದ ಕಮಿಷನ್ ಬಾಂಬ್!
ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆಕ್ರೋಶ
ರಾಜ್ಯ ಸರ್ಕಾದ ವಿರುದ್ಧ ಗುತ್ತಿಗೆದಾರರ ಸಂಘ ಹೋರಾಟ
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೆಂಪಣ್ಣ
ಬೆಂಗಳೂರು : ರಾಜ್ಯ ಸರಕಾರ ವಿರುದ್ಧ 40% ಕಮಿಷನ್ ಆರೋಪ ಮತ್ತೆ ಜೀವ ಪಡೆದುಕೊಂಡಿದ್ದು, ಗುತ್ತಿಗೆದಾರರ ಸಂಘ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದೆ.
ಇಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ 30ಕ್ಕೂ ಹೆಚ್ಚಿನ ಸದಸ್ಯರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಈ ವೇಳೆ ಬಗ್ಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದರು. ನಾವು ಒಂದು ವರ್ಷ ಎರಡು ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ.
![WE WILL WRITE TO PM MODI ON COMMISSION ISSUE SAYS KEMPANNA saaksha tv](http://saakshatv.com/wp-content/uploads/2022/08/kempanna.jpg)
ಇಲ್ಲಿ ಮುಖ್ಯಮಂತ್ರಿಗಳ ಮಾತಿಗೂ ಬೆಲೆ ಇಲ್ಲದಂತೆ ಆಗಿದೆ. ಇವರಿಗೆ ಮಾನ ಮರ್ಯಾದೆ ಇಲ್ವಾ..? 22 ಸಾವಿರ ಕೋಟಿ ಬಿಲ್ ಪೆಂಡಿಂಗ್ ಇದೆ.
ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದಾಗಿದೆ. ಇದರಲ್ಲಿ ಬೊಮ್ಮಾಯಿ ಸೇರಿದಂತೆ ಎಲ್ಲರೂ ಇದ್ದಾರೆ. ಯಾರಿಗೂ ರ್ಯಾಂಕಿಂಗ್ ಕೊಡೋಕೆ ಆಗಲ್ಲ. ಭ್ರಷ್ಟಾಚಾರದಲ್ಲಿ ಎಲ್ಲರೂ ನಂಬರ್ ಒನ್ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಪತ್ರ ಬರೆಯುತ್ತೇವೆ ಎಂದು ತಿಳಿಸಿದ ಕೆಂಪಣ್ಣ ಅವರು, ಸಿದ್ದರಾಮಯ್ಯ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇವೆ.
ಸದನದಲ್ಲಿ ಅದನ್ನ ಪ್ರಸ್ತಾಪಿಸುತ್ತೇನೆ ಎಂದಿದ್ದಾರೆ. ಆದ್ರೆ ಅವರಿಗೆ ಯಾವುದೇ ದಾಖಲೆಗಳನ್ನು ನಾನು ನೀಡಲ್ಲ. ನ್ಯಾಯಾಂಕ ತನಿಖೆ ಮಾಡಿದ್ರೆ ದಾಖಲೆಗಳನ್ನು ಕೊಡುತ್ತೇನೆ ಎಂದು ಹೇಳಿದರು.