ದುರ್ಬಲ ಮುಖ್ಯಮಂತ್ರಿ, ದುರ್ಬಲ ಹೈಕಮಾಂಡ್ : ಸಿದ್ದರಾಮಯ್ಯ
ಬೆಂಗಳೂರು : ಬಿಜೆಪಿ ಹೈಕಮಾಂಡ್ ವೀಕ್ ಆಗಿದೆ. ದುರ್ಬಲ ಮುಖ್ಯಮಂತ್ರಿ, ದುರ್ಬಲ ಹೈಕಮಾಂಡ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ಕಾಟ, ಬ್ಲ್ಯಾಕ್ ಫಂಗಸ್ ಸಂಕಷ್ಟದ ಮಧ್ಯ ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕೂಗು ಜೋರಾಗಿಯೇ ಕೇಳಿಬರುತ್ತಿದೆ.
ಪದೇ ಪದೇ ನಾಯಕತ್ವ ಬದಲಾವಣೆ ಸುದ್ದಿ ಮುನ್ನೆಲೆಗೆ ಬರುತ್ತಿದ್ದ ಕಾರಣ, ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಹೈಕಮಾಂಡ್ ಕೇಳಿದ್ರೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿಕೆ ನೀಡಿದ್ದರು.
ಇದು ರಾಜ್ಯ ಬಿಜೆಪಿಯಲ್ಲಿ ಭಾರಿ ಸಂಚಲನವನ್ನೇ ಸೃಷ್ಠಿಸಿದೆ. ಸಿಎಂ ಈ ರೀತಿ ಹೇಳಿಕೆ ನೀಡುತ್ತಿದ್ದಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸಹಿ ಸಂಗ್ರಹದಂತ ಕಾರ್ಯಕ್ರಮಗಳು ನಡೆದಿವೆ.
ಈ ಮಧ್ಯೆ ಇದೇ ವಿಚಾರವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಬದಲಾವಣೆಗೆ ಚರ್ಚೆ ನಡೆಯುತ್ತಿದೆ, ಇದನ್ನು ನಾನು ಮುಂಚೆನೇ ಹೇಳಿದ್ದೆ.
ಯೋಗೇಶ್ವರ್ ಮೇಲೇಕೆ ಕ್ರಮ ತೆಗೆದುಕೊಳ್ಳಲಿಲ್ಲ. ಯತ್ನಾಳ್ ಮೇಲೆ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಅರುಣ್ ಸಿಂಗ್ ಹೇಳಿದಾಕ್ಷಣ ಅವರ್ಯಾರು ಸುಮ್ಮನಾಗಲ್ಲ. ಬೆಂಕಿ ಇಲ್ಲದೇ ಯಾವ ಹೊಗೆಯೂ ಆಡುವುದಿಲ್ಲ.
ನಾಯಕತ್ವ ಬದಲಾವಣೆ ಆಗಬೇಕೆಂದವರ ಮೇಲೆ ಕ್ರಮ ಏಕೆ ತೆಗೆದುಕೊಂಡಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.