ವೀಕೆಂಡ್ ಕರ್ಫ್ಯೂ : ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ
ಚಾಮರಾಜನಗರ : ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆ ಇಂದಿನಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗುವುದರಿಂದ ಪ್ರಸಿದ್ಧ ಯಾತ್ರಾಸ್ಥಳ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕುರಿತು ಪ್ರಾಧಿಕಾರ ಹೇಳಿಕೆ ಬಿಡುಗಡೆ ಮಾಡಿದೆ.
ಇಂದು ಸಂಜೆ 5ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ದೇಗುಲದಲ್ಲಿ ಅರ್ಚಕರು ನಡೆಸುವ ನಿತ್ಯದ ಪೂಜಾ ಕೈಂಕರ್ಯ ಬಿಟ್ಟರೆ ಊಳಿದೆಲ್ಲಾ ಸೇವೆಗಳು ರದ್ದಾಗಿವೆ.
ಆನ್ಲೈನ್ನಲ್ಲಿ ಬುಕ್ಕಿಂಗ್ ಮಾಡಿದ್ದರೂ ವಸತಿ, ದೇಗುಲ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದೆ.