ಕೋವಿಡ್ ಕಡಿವಾಣಕ್ಕೆ ಮಂಡ್ಯದಲ್ಲಿ ಟಫ್ ರೂಲ್ಸ್… ಯಾವುದಕ್ಕೆ ವಿನಾಯಿತಿ..?
ಮಂಡ್ಯ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ, ವೈಟ್ ಕರ್ಫ್ಯೂ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ತಿಂಗಳ ಅಂತ್ಯದವರೆಗೂ ಜಿಲ್ಲಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ಮಂಡ್ಯ ಡಿಸಿ ಎಸ್.ಅಶ್ವತಿ ಅವರು ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಯಾವುದಕ್ಕೆ ವಿನಾಯಿತಿ.. ಯಾವುದಕ್ಕೆ ನಿರ್ಬಂಧ..?
ಮದುವೆ, ನಿಶ್ಚಿತಾರ್ಥ, ಬೀಗರ ಔತಣಕ್ಕೆ 100 ಜನರಿಗೆ ಮಾತ್ರ ಅವಕಾಶ.
ಅಂತ್ಯ ಸಂಸ್ಕಾರ, ಹಾಗೂ ತಿಥಿ ಕಾರ್ಯಕ್ಕೆ ಕೇವಲ 30 ಜನರಿಗೆ ಅವಕಾಶ.
ದೇವರ ದರ್ಶನಕ್ಕೆ ಒಂದು ಸಮಯಕ್ಕೆ 50 ಜನರಿಗೆ ಅವಕಾಶ..
ವಿಶೇಷ ದಿನ, ಸಾರ್ವತ್ರಿಕ ರಜಾ ದಿನಗಳಲ್ಲಿ ದೇವಾಲಯ, ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.
ಜಾತ್ರೆ, ಧನದ ಜಾತ್ರೆ, ಗ್ರಾಮ ದೇವತೆ ಹಬ್ಬ, ಕೊಂಡೊತ್ಸವ, ಹಾಗೂ ಸಾಮೂಹಿಕ ಪ್ರಾರ್ಥನೆಗೂ ಅವಕಾಶ ಇಲ್ಲ..
ಬೃಹತ್ ರ್ಯಾಲಿ, ಧರಣಿ, ಪ್ರತಿಭಟನೆಗೆ ನಿಷೇಧ..
ಪಬ್, ಬಾರ್ & ರೆಸ್ಟೋರೆಂಟ್,ಹೋಟೆಲ್, ಚಿತ್ರಮಂದಿರ, ಸಭಾಂಗಣ, ರಂಗಮಂದಿರ, ಈಜುಕೊಳ,ಹಾಗೂ ಜಿಮ್ ಕೇಂದ್ರಕ್ಕೆ 50%.
ಸ್ಪೋರ್ಟ್ಸ್, ಕ್ರೀಡಾಂಗಣ ಹಾಗೂ ಕಾಂಪ್ಲೆಕ್ಸ್ ಗೆ 50% ಅವಕಾಶ..
ನೈಟ್ ಕರ್ಫ್ಯೂ ವೇಳೆ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ..
ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ರ ವರಗೆ ವೀಕೆಂಡ್ ಕರ್ಫ್ಯೂ ಜಾರಿ.
ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗೆ ನಿರ್ಬಂಧ..









