ಜಿ.ಟಿ.ದೇವೇಗೌಡ ಕಾಂಗ್ರೆಸ್ ಗೆ ಬಂದರೇ ಸ್ವಾಗತ : ತನ್ವೀರ್ ಸೇಠ್ GT Devegowda saaksha tv
ಮೈಸೂರು : ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಈಗಾಗಲೇ ಜೆಡಿಎಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದಾರೆ.
ಅವರು ತೆನೆ ಇಳಿಸಿ ಕೈ ಹಿಡಿಯಲಿದ್ದಾರೆ ಅನ್ನೋ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಈ ಹಿಂದೆ ಸ್ವತಃ ಅವರೇ ಕಾಂಗ್ರೆಸ್ ಸೇರೋದಾಗಿ ಹೇಳಿಕೊಂಡಿದ್ದರು. ಆದ್ರೆ ಅದಕ್ಕೂ ಮುಹೂರ್ತ ಕೂಡಿಬಂದಂತೆ ಕಾಣುತ್ತಿಲ್ಲ.
ಈ ಮಧ್ಯೆ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಜಿ.ಟಿ. ದೇವೇಗೌಡ ನಮ್ಮ ಪಕ್ಷದ ಸಿದ್ದಾಂತಗಳನ್ನು ಒಪ್ಪಿ ಬರುವುದಾದರೆ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಕಾಂಗ್ರೆಸ್ ಸೇರುವ ಬಗ್ಗೆ ನನಗೆ ಗೊತ್ತಿಲ್ಲ, ರಾಜಕಾರಣ ನಿಂತ ನೀರಲ್ಲ. ಅದು ಹರಿಯುತ್ತಿರಬೇಕು.
ನಾನು ಹಿಂದೆಯೇ ಹೇಳಿದ್ದೇನೆ, ಜಿಟಿ ದೇವೇಗೌಡರು ಮನಸ್ಸು ಮಾಡಿ, ನಮ್ಮ ಪಕ್ಷದ ಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಬರುವುದಾದರೆ, ಅವರನ್ನ ನಾನು ಅತ್ಯಂತ ನಮ್ರತೆಯಿಂದ ಸ್ವಾಗತ ಮಾಡುತ್ತೇನೆ.
ಆದರೆ ಇದರ ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದಿದ್ದಾರೆ ತನ್ವೀತ್ ಸೇಠ್.