ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಚಿಕಿತ್ಸಾ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಮತ್ತು ವೈದ್ಯರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯ 20 ಹಾಸಿಗೆಗಳ ಆಯುಷ್ ಕಟ್ಟಡದಲ್ಲಿ ಕೊರೊನಾ ಶಂಕಿತರನ್ನು ದಾಖಲಿಸಿಲಾಗುತ್ತದೆ. ಅವರಲ್ಲಿ ಯಾರಿಗಾದರೂ ಪಾಸಿಟಿವ್ ಕಂಡು ಬಂದಲ್ಲಿ ಅವರನ್ನು ಸೂಪರ್ ಸ್ಪೆಶಾಲಿಟಿ ಕಟ್ಟಡದ ವಾರ್ಡಿಗೆ ವರ್ಗಾವಣೆ ಮಾಡಲಾಗುವುದು ಎಂದರು. ಹಾಗೆಯೇ ಈಗಾಗಲೇ ಆಸ್ಪತ್ರೆಯಲ್ಲಿ ಬೇರೆ ಕಾಯಿಲೆಗಳ ಚಿಕಿತ್ಸೆ ಪಡೆಯಲು ಒಳರೋಗಿಗಳಾಗಿ ದಾಖಲಾಗಿರುವ ಸುಮಾರು 218 ರೋಗಿಗಳನ್ನು ಹಂತ ಹಂತವಾಗಿ ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮೂರು ದಿನಗಳ ಒಳಗಾಗಿ ವರ್ಗಾವಣೆ ಮಾಡಲಾಗುವುದು. ಹೊರರೋಗಿ ಚಿಕಿತ್ಸೆಗಾಗಿ ಬರುವವರನ್ನು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತದೆ. ಹಂತಹಂತವಾಗಿ 705 ಹಾಸಿಗೆಗಳ ವೆನ್ಲಾಕ್ ಆಸ್ಪತ್ರೆಯ ಹಳೆ ಕಟ್ಟಡದ ವಾರ್ಡ್ಗಳನ್ನು ಕೊರೊನಾ ಪ್ರಕರಣಗಳನ್ನು ದಾಖಲೆ ಮಾಡಲು ಉಪಯೋಗಿಸಲಾಗುವುದು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ
ಮಾಜಿ ಪ್ರಧಾನಿ H. D. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ಸಿಗದ ವಿಚಾರವಾಗಿ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ತೀವ್ರವಾಗಿ...








