West Bengal : TMC ಕಾರ್ಯಕರ್ತನ ನಿವಾಸದಲ್ಲಿ ಕಚ್ಚಾ ಬಾಂಬ್ ಸ್ಪೋಟ – ಮೂವರ ಸಾವು..
ಶುಕ್ರವಾರ ತಡರಾತ್ರಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್ಕುಮಾರ್ ಮನ್ನಾ ಅವರ ನಿವಾಸದಲ್ಲಿ ನಡೆದಿದೆ.
ಕಾಂಟೈ ಪಟ್ಟಣದಿಂದ 1.5 ಕಿಮೀ ದೂರದಲ್ಲಿರುವ ಭೂಪತಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಶನಿವಾರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
“ಸ್ಫೋಟಕ್ಕೆ ಕಾರಣವನ್ನ ಇನ್ನೂ ತಿಳಿದುಬಂದಿಲ್ಲ, ಹೆಚ್ಚಿನ ತನಿಖೆ ನಡೆಯುತ್ತಿದೆ. ಸ್ಪೋಟದ ಪರಿಣಾಮ ಎಷ್ಟು ಪ್ರಬಲವಾಗಿತ್ತೆಂದರೆ ಹುಲ್ಲಿನ ಛಾವಣಿಯೊಂದಿಗೆ ಮಣ್ಣಿನ ಮನೆ ಹಾರಿಹೋಗಿದೆ” ಎಂದು ಕಂಟೈನ್ ಉಪವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು. ವಿಧಿವಿಜ್ಞಾನದ ತಂಡ ಮಾದರಿಗಳನ್ನು ಸಂಗ್ರಹಿಸಲು ಸ್ಥಳಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್, ಸ್ಪೋಟದ ಹೊಣೆಗಾರಿಕೆಯನ್ನ ಟಿಎಂಸಿ ಗೆ ಹೊರಿಸಿದ್ದರೆ. “ರಾಜ್ಯದಲ್ಲಿ ಬಾಂಬ್ ತಯಾರಿಕೆ ಉದ್ಯಮ ಮಾತ್ರ ಅಭಿವೃದ್ಧಿ ಹೊಂದುತ್ತಿದೆ” ಎಂದು ಹೇಳಿದ್ದಾರೆ. ಇಂತಹ ಘಟನೆಗಳ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಏಕೆ ಮೌನವಾಗಿದ್ದಾರೆ ಎಂದು ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಪ್ರಶ್ನಿಸಿದ್ದಾರೆ, ಅವರಿಂದ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
West Bengal: Crude bomb blast at TMC worker’s residence – 3 killed..