ಅಂತು ಇಂತು ನೂತನ ಶಾಸಕರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಂತ್ರಿಗಿರಿಗಾಗಿ ಕಾಲಿಗೆ ಚಕ್ರಕಟ್ಟಿಕೊಂಡವರAತೆ ಸಿಎಂ ಮನೆಗೆ ಪರೇಡ್ ನಡೆಸುತ್ತಿದ್ದವರು ಇಂದು ನಗುನಗುತ್ತಲೇ ಪದಗ್ರಹಣ ಮಾಡಿಕೊಂಡಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಈ ಕಾರ್ಯಕ್ರಮದ ಬಳಿಕ ಮಾತನಾಡಿದ ನೂತನ ಸಚಿವರು, ಪಕ್ಷಕ್ಕೆ, ಸಿಎಂಗೆ ಧನ್ಯವಾದ ಹೇಳುತ್ತಾ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ:
ನಾವು ಮಹತ್ತರ ಘಟ್ಟಕ್ಕೆ ಕಾಲಿಟ್ಟಿದ್ದೇವೆ. ಸಚಿವ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರು ನುಡಿದಂತೆ ನಡೆದುಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ತಾವು ಬದ್ಧರಾಗಿರುವುದಾಗಿ ನೂತನ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ.
ಬಿ.ಸಿ.ಪಾಟೀಲ್ ಪ್ರತಿಕ್ರಿಯೆ:
ಯಡಿಯೂರಪ್ಪನವರು ಕೊಟ್ಟ ಆಶ್ವಾಸನೆಯಂತೆ ನಡೆದುಕೊಂಡಿದ್ದಾರೆ. ತಮಗೆ ಸಚಿವ ಸ್ಥಾನ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಬಲ ತುಂಬಿದ್ದಾರೆ. ತಾವು ಸಚಿವರಾಗಲು ಸಹಕರಿಸಿದ ಕ್ಷೇತ್ರದ ಜನತೆ ಹಾಗೂ ಬಿಜೆಪಿ ಹಿರಿಯ ನಾಯಕರಿಗೆ ತಮ್ಮ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ರಾಜುಗೌಡ ಪ್ರತಿಕ್ರಿಯೆ:
ಸರ್ಕಾರ ರಚನೆಗೆ ಕಾರಣರಾದ ಹತ್ತು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದು ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಆಶಾ ಭಾವನೆ ಹೊಂದಿದ್ದೇವೆ ಎಂದು ಶಾಸಕ ರಾಜುಗೌಡ ಪ್ರತಿಕ್ರಿಯಿಸಿದ್ದಾರೆ.
ಸೋಮಶೇಖರ್
ಮತದಾರರಿಂದಲೇ ನಾವು ಇಂದು ಕ್ಯಾಬಿನೆಟ್ ದರ್ಜೆ ಸಚಿವರಾಗಲು ಸಾಧ್ಯವಾಗಿದೆ. ಮತದಾರರು ಹಾಗೂ ತಮ್ಮ ಮಾತನ್ನು ಉಳಿಸಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸೋಮೇಖರ್ ಧನ್ಯವಾದ ಹೇಳಿದ್ದಾರೆ.