“ಬಿಟ್ ಕಾಯಿನ್ ಎಂದ್ರೇನು..? ಮಹಾನ್ ಆರ್ಥಿಕ ತಜ್ಞ ಸಿದ್ದರಾಮಯ್ಯ ವಿವರಿಸಲಿ” Siddaramaiah saaksha tv
ಮೈಸೂರು : ಬಿಟ್ ಕಾಯಿನ್ ಎಂದರೇನು ಅಂತ ನಮ್ಮಂತವರಿಗೆ ಮಹಾನ್ ಆರ್ಥಿಕ ತಜ್ಞ ಸಿದ್ದರಾಮಯ್ಯ ಅವರು ವಿವರಿಸಿಲಿ ಎಂದು ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಟ್ ಕಾಯಿನ್ ವಿಚಾರವಾಗಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಾಪ್ ಸಿಂಹ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಬಿಟ್ ಕಾಯಿನ್ ಎಂದರೇನು? ಇದರ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿದೆ ಅದನ್ನು ನಮ್ಮಂತವರಿಗೆ ಮಹಾನ್ ಆರ್ಥಿಕ ತಜ್ಞ ಸಿದ್ದರಾಮಯ್ಯನವರು ವಿವರಿಸಲಿ. ಆರೋಪ ಮಾಡಿದವರು ಅವರೇ ನಮಗೆ ತಿಳಿಸಿಕೊಡಲಿ. ನನಗೆ ಆ ಬಗ್ಗೆ ಮಾಹಿತಿ ಇಲ್ಲ, ಹಾಗಾಗಿ ಕೇಳುತ್ತಿದ್ದೇನೆ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆರೋಪ ಮಾಡೋದ್ರ ಜೊತೆಗೆ ಮಾಧ್ಯಮಗಳ ಮೂಲಕ ನಿರೀಕ್ಷಣಾ ಜಾಮೀನು ಹಾಕುತ್ತಿದೆ. ಇದರ ಬಗ್ಗೆ ಗಂಭೀರ ತನಿಖೆ ಮಾಡಿದ್ರೆ ಕಾಂಗ್ರೆಸ್ ನವರೇ ಸಿಕ್ಕಿ ಹಾಕಿಕೊಳ್ತಾರೆ. ಈಗಾಗಲೇ ಮೊದಲ ಚಾರ್ಜ್ ಶೀಟ್ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರೆ ಉಲ್ಲೇಖ ಆಗಿದೆ ಎಂದು ಹೊಸ ಬಾಂಬ್ ಸಿಡಿಸಿದರು.