70 ವರ್ಷ ಮೇಲ್ಪಟ್ಟವರು ಕೂಡ ಆಯುಷ್ಮಾನ್ ಭಾರತ ಯೋಜನೆಗೆ ಒಳಪಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಣಾಳಿಕೆ ಮೂಲಕ ಭರವಸೆ ನೀಡಿದ್ದಾರೆ.
ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. 70 ವರ್ಷ ಮೇಲ್ಪಟ್ಟವರಿಗೆ ಇನ್ನು ಮುಂದೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ಮೋದಿ ಅಭಯ ನೀಡಿದ್ದಾರೆ. ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯೊಂದಿಗೆ ಔಷಧ ವಿತರಣೆ ಮಾಡಲಿದ್ದೇವೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರಯೋಜನಗಳು ಮುಂದುವರಿಯುತ್ತವೆ. ಸಹಕಾರದ ಮೂಲಕ ಸಮೃದ್ಧಿ ಎಂಬ ದೂರದೃಷ್ಟಿಯೊಂದಿಗೆ ಬಿಜೆಪಿ ರಾಷ್ಟ್ರೀಯ ಸಹಕಾರ ನೀತಿ ಪರಿಚಯಿಸಲಿದೆ. ದೇಶಾದ್ಯಂತ ಹೈನುಗಾರಿಕೆ ಮತ್ತು ಸಹಕಾರ ಸಂಘಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.
ಪೈಪ್ ಮೂಲಕ ಗ್ಯಾಸ್ ತಲುಪಿಸುವುದಕ್ಕಾಗಿ 4 ಕೋಟಿ ಮನೆಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರದಿಂದ ಸಿಗುತ್ತಿರುವ ಹೆಚ್ಚುವರಿ ಮಾಹಿತಿಯನ್ನು ಪರಿಗಣಿಸಿ, ಆ ಕುಟುಂಬಗಳ ಬಗ್ಗೆ ಚಿಂತಿಸುವುದರೊಂದಿಗೆ ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಭರವಸೆಯೊಂದಿಗೆ ನಾವು ಮುಂದುವರಿಯುತ್ತೇವೆ. ಮುದ್ರಾ ಯೋಜನೆಯಡಿ 20 ರೂ. ಲಕ್ಷ ಸಾಲ ದೊರೆಯಲಿದೆ. ಮುದ್ರಾ ಯೋಜನೆಯಡಿ ಮೊದಲ ಸಾಲ 10 ಲಕ್ಷ ರೂ., ಬಿಜೆಪಿ ಈ ಮಿತಿಯನ್ನು 20 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ.
ವಂದೇ ಭಾರತ್ನ ಮೂರು ಮಾದರಿಗಳು ದೇಶದಲ್ಲಿ ನಡೆಯಲಿವೆ. ವಂದೇ ಭಾರತ್ ಸ್ಲೀಪರ್, ವಂದೇ ಭಾರತ್ ಚೇರ್ಕಾರ್ ಮತ್ತು ವಂದೇ ಭಾರತ್ ಮೆಟ್ರೋ. ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ, ಪೈಪ್ಲೈನ್ ಮೂಲಕ ಅಡುಗೆ ಅನಿಲ ಪೂರೈಕೆ, ಕೋಟ್ಯಂತರ ಕುಟುಂಬಗಳಿಗೆ ಸೋಲಾರ್ ಮೂಲಕ ಉಚಿತ ವಿದ್ಯುತ್ ಪೂರೈಕೆ, ಮಂಗಳಮುಖಿಯರಿಗೂ ಆಯುಷ್ಮಾನ್ ಭಾರತ್ ಯೋಜನೆ ಅಡಿ ಉಚಿತ ಚಿಕಿತ್ಸೆ, 10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ, ಮೂರು ಕೋಟಿ ಮಹಿಳೆಯರಿಗೆ ಲಕ್ಪತಿ ದೀದಿ ಯೋಜನೆಯ ಗ್ಯಾರಂಟಿ, ರೈತರಿಗೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಮುಂದುವರಿಕೆ, ದೇಶದಾದ್ಯಂತ ಡೇರಿ ಸಹಕಾರ ಸಂಘ, ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ, ತಮಿಳು ಭಾಷೆಯ ವೈಶಿಷ್ಟ್ಯ ಸಾರಲು ಆದ್ಯತೆ, ಉದ್ಯೋಗ ಖಾತರಿ, 2036 ರಲ್ಲಿ ಒಲಿಂಪಿಕ್ಸ್ ಆತಿಥ್ಯ, 3 ಕೋಟಿ ಲಕ್ಪತಿ ದೀದಿ ಮಾಡುವ ಗುರಿ, ಮಹಿಳಾ ಮೀಸಲಾತಿ ಜಾರಿಗೊಳಿಸುವ ಭರವಸೆ, ಇ-ಶ್ರಮ್ ಮೂಲಕ ಕಲ್ಯಾಣ ಯೋಜನೆಯ ಪ್ರಯೋಜನ, 2025 ಬುಡಕಟ್ಟು ಹೆಮ್ಮೆಯ ವರ್ಷ, ಪ್ರತಿ ಕ್ಷೇತ್ರದಲ್ಲೂ ಒಬಿಸಿ-ಎಸ್ಸಿ-ಎಸ್ಟಿಗೆ ಗೌರವ, ಪ್ರಪಂಚದಾದ್ಯಂತ ರಾಮಾಯಣ ಹಬ್ಬ, ಒಂದು ರಾಷ್ಟ್ರ, ಒಂದು ಚುನಾವಣೆ ಸಂಕಲ್ಪವನ್ನು ಬಿಜೆಪಿ ಹೊಂದಿದೆ.