ಸಿಂದಗಿಯಲ್ಲಿ ಕಾಂಗ್ರೆಸ್ ಸೋಲಿಗೆ ಜೆಡಿಎಸ್ ನಿಂದ ಬರವರು ಕಾರಣನಾ..?
ಬೆಂಗಳೂರು : ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಹಾನಗಲ್ ನಲ್ಲಿ ಕಾಂಗ್ರೆಸ್ ಶ್ರೀನಿವಾಸ್ ಮಾನೆ ಗೆಲುವಿನ ನಗೆ ಬೀರಿದ್ದಾರೆ.
ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ. ಯಾಕಂದರೇ ಹಾನಗಲ್ ಕ್ಷೇತ್ರ ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯ ಕ್ಷೇತ್ರವಾಗಿದೆ.
ಈ ಹಿನ್ನೆಲೆಯಲ್ಲಿ ಹಾನಗಲ್ ನಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿತ್ತು ಬಿಜೆಪಿ. ಆದ್ರೆ ಕಾಂಗ್ರೆಸ್ ಪಕ್ಷ ಹಾನಗಲ್ ನಲ್ಲಿ ಜಯಭೇರಿ ಬಾರಿಸಿದೆ.
ಇತ್ತ ಸಿಂದಗಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಆಘಾತ ಎದುರಾಗಿದೆ.
ಚುನಾವಣೆಯನ್ನು ಗೆಲ್ಲಲೇಬೇಕೆಂದು ಅಶೋಕ್ ಮನಗೂಳಿ ಅವರನ್ನು ಜೆಡಿಎಸ್ ನಿಂದ ಕರೆ ತಂದಿದ್ದರು. ಆದ್ರೆ ಕಾಂಗ್ರೆಸ್ ನಾಯಕ ಪ್ಲಾನ್ ಕೈಕೊಟ್ಟಿದೆ. ಸಿಂದಗಿಯಲ್ಲಿ ಕಾಂಗ್ರೆಸ್ ಪಕ್ಷ ಭಾರಿ ಅಂತರದ ಸೋಲು ಕಂಡಿದೆ.
ಇದೀಗ ಈ ಸೋಲಿನ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನ ವಿಭಿನ್ನ ಮಾತುಗಳು ಕೇಳಿಬರುತ್ತಿದೆ.
ಸಿಂದಗಿ ಕಾಂಗ್ರೆಸ್ ಅಭ್ಯರ್ಥಿ ಜೆಡಿಎಸ್ ನಿಂದ ಬಂದವರಾಗಿದ್ದ ಕಾರಣಕ್ಕೆ ನಮಗೆ ಹಿನ್ನಡೆಯಾಗಿದೆ ಎಂದು ಕೆಲವರು ಹೇಳಿಕೊಂಡಿದ್ದಾರೆ.
ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಅಭಿಪ್ರಾಯ ಸರಿ ಇಲ್ಲ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದು, ಸಿಂದಗಿ ಅಭ್ಯರ್ಥಿ ಜೆಡಿಎಸ್ ನಿಂದ ಬಂದವರಾಗಿದ್ದ ಕಾರಣಕ್ಕೆ ನಮಗೆ ಹಿನ್ನಡೆಯಾಯಿತು ಎನ್ನುವ ಅಭಿಪ್ರಾಯ ಸರಿ ಅಲ್ಲ ಎಂದಿದ್ದಾರೆ.
ಅಲ್ಲದೆ ಜೆಡಿಎಸ್ ನಿಂದ ಬಂದ ಜಮೀರ್ ಖಾನ್, ಅಖಂಡಾ ಶ್ರೀನಿವಾಸಮೂರ್ತಿ, ಭೀಮಾ ನಾಯಕ್ ಗೆದ್ದಿಲ್ಲವೇ? ನಾನು ಕೂಡ ಜೆಡಿಎಸ್ ನಿಂದ ಕಾಂಗ್ರೆಸ್ ಸೇರಿ ಗೆದ್ದಿದ್ದೇನೆ ಎಂದು ಹೇಳಿದ್ದಾರೆ.
ಆದ್ರೆ ಜೆಡಿಎಸ್ ನಿಂದ ಬಂದ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಹೊಂದಾಣಿಕೆ ಸಮಸ್ಯೆಯಿಂದಾಗಿ ಸ್ವಲ್ಪ ಹಿನ್ನಡೆಯಾಗಿದೆ ಎಂದು ಬರೆದುಕೊಂಡಿದ್ದಾರೆ.