ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮೊದಲ ಏಕಾದಶಿಯ ಮಹತ್ವವೇನು? ಏಕಾದಶಿಯ ದಿನ ಯಾಕೆ ಉಪವಾಸ ಮಾಡಬೇಕು ಮತ್ತು ಏನು ಫಲ..?

admin by admin
July 20, 2021
in Astrology, Newsbeat, ಕ್ರೀಡೆ
lord vishnu saakshatv
Share on FacebookShare on TwitterShare on WhatsappShare on Telegram

ಮೊದಲ ಏಕಾದಶಿಯ ಮಹತ್ವವೇನು? ಏಕಾದಶಿಯ – ದಿನ ಯಾಕೆ ಉಪವಾಸ ಮಾಡಬೇಕು ಮತ್ತು ಏನು ಫಲ..?

lord vishnu saakshatvಇಂದಿನಿಂದ ಚಾತುರ್ಮಾಸ್ಯ ಶುರುವಾಗುತ್ತದೆ. ಚಾತುರ್ಮಾಸ್ಯದ ನೇಮ ನಿತ್ಯಗಳು ನಾಳೆ ಸಂಕಲ್ಪ ಪೂರ್ವಕ ವ್ರತ ಧಾರಣಮಾಡಿ ಹಿಡಿಯಬೇಕು

Related posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

February 14, 2026
india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026

ಆಷಾಢ ಏಕಾದಶಿಯನ್ನು ಶಯನಿ ಏಕಾದಶಿ ಅನ್ನುವರು , ಕಾರಣ ವಿಷ್ಣು ಇನ್ನು ನಾಲ್ಕು ತಿಂಗಳು ಯೋಗನಿದ್ರೆಗೆ ಜಾರುವನು ಅದಕ್ಕಾಗಿ ಅದನ್ನು ಶಯನೀ ಏಕಾದಶಿ ಎನ್ನುವರು , ಈ ಏಕಾದಶಿಯನ್ನು ಮಾಡಿದರೆ ಸಂಪತ್ತನ್ನು ಭಾಗ್ಯವನ್ನು ಪಡೆಯುತ್ತಾರೆ , ದುಃಖ ದೂರವಾಗುತ್ತದೆ….. ಬನ್ನಿ ಬಂಧುಗಳೇ ನಿಮಗೆ ಏಕಾದಶಿ ಬಗ್ಗೆ ತಿಳಿಸಿ ಕೊಡುವೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಪ್ರಾಚೀನ ಸಮಯದಲ್ಲಿ ಮುರ ಎಂಬ ರಾಕ್ಷಸನಿದ್ದ .ಇವನು ಇಂದ್ರಾದಿ ದೇವತೆಗಳನ್ನೇಲ್ಲ ಸೋಲಿಸಿದನು. ಆಗ ದೇವತೆಗಳೆಲ್ಲ ಒಟ್ಟಾಗಿ ಕ್ಷೀರಸಾಗರದಲ್ಲಿ ಮಲಗಿದ್ದ ಶ್ರೀಮನ್ನಾರಾಣನನ್ನು ಮುರನಿಂದ ತಮ್ಮನ್ನು ರಕ್ಷಿಸುವಂತೆ ಪ್ರಾರ್ಥಿಸಿದರು.

ಆಗ ದೇವತೆಗಳೆಲ್ಲರ ಪ್ರಾರ್ಥನೆಯಂತೆ ಶ್ರೀಹರಿಯು ತನ್ನ ದಿವ್ಯ ಬಾಣಗಳು ಹಾಗೂ ಹಾಗೂ ಚಕ್ರವನ್ನು ಮುರಾಸುರನ ಮೇಲೆ ಪ್ರಯೋಗಿಸಿದನು ಇದರಿಂದ ಮುರಾಸುರನನ್ನು ಬಿಟ್ಟು ಉಳಿದೆಲ್ಲ ರಾಕ್ಷಸರು ಹತರಾದರು . ಶ್ರೀಹರಿಯು ಬದರಿಕಾಶ್ರಮಕೆ ಹೋಗಿ ಅಲ್ಲಿದ್ದ ಒಂದು ಗುಹೆಯಲ್ಲಿ  ಮಲಗಿಬಿಟ್ಟರು. ಅಲ್ಲಿಗೆ ಬಂದ ಮುರನು ವಿಷ್ಣುವನ್ನು ಕೊಲ್ಲಲು ಬಂದನು. ಆಗ ಭಗವಂತನ ತೆಜಾಂಶದಿಂದ ಅಸ್ತ್ರ ಶಸ್ತ್ರ ಸಜ್ಜಿತಳಾದ ಒಂದು ಕನ್ಯೆ ಅವತಾರವಾಯಿತು ಮುರನಿಗೂ ಆಕೆಗೂ ಯುದ್ಧವಾಯಿತು. ಆಕೆಯ ಒಂದೇ ಹೂಂಕಾರಕ್ಕೆ ಸುಟ್ಟು ಭಸ್ಮನಾದ ಇದರಿಂದ ಸಂತೋಷ ಗೊಂಡ ಶ್ರೀಹರಿಯು ಆಕೆಯು ಬೇಡಿದಂತೆ ವರ ಕರುಣಿಸಿದನು.

lord vishnu saakshatvಆಕೆಯೇ ಸಾಕ್ಷಾತ ಏಕಾದಶಿ. ಆಕೆಯು ಪರಮಾತ್ಮನಲ್ಲಿ ಭಯಭಕ್ತಿಯಿಟ್ಟು ತನ್ನದಿನದಂದು ಉಪವಾಸ ಮಾಡಿದರೆ ಅವರ ಪಾಪಗಳನ್ನೇಲ್ಲ ಕಳೆದು ಮೊಕ್ಷ ಕರುಣಿಸುವಂತೆ ಕೋರಿಕೊಂಡಳು. ಅದಕ್ಕಾಗಿಯೇ ಎರಡೂ ಪಕ್ಷಗಳ ಏಕಾದಶಿಗಳು ಪಾಪನಾಶಕಗಳು .ಆದ್ದರಿಂದ ಏಕಾದಶಿಯ ಉಪವಾಸ ಅತ್ಯಂತ ಶ್ರೇಷ್ಠವಾದದ್ದು . ಆದಿನ ಉಪವಾಸ ಮಾಡಿ ಶ್ರೀಮನ್ನಾರಾಣನ ಸ್ಮರಣೆ ದ್ವಾದಶಿಯ ಪಾರಣೆ
ಮಾಡಿದಲ್ಲಿ ಮಾಡಿದರೆ ಕಲಿಯ ದೋಷ ಪರಿಹಾರ ..

ಆಶಾಡ ಏಕಾದಶಿಮಹಾತ್ಮೆ #ಶಯನಿ ಏಕಾದಶಿ . ಒಮ್ಮೆ ನಾರದರು ತನ್ನ ತಂದೆಯಾದ ಚತುರ್ಮುಖ ಬ್ರಹ್ಮದೇವರ ಕುರಿತು ಆಷಾಢಮಾಸದ ಶುಕ್ಲ ಪಕ್ಷದಲ್ಲಿ
ಬರುವ ಏಕಾದಶಿಯ ಮಹಿಮೆಯನ್ನು ಹೇಳಬೇಕಾಗಿ ಬೇಡಿಕೊಂಡರು. ಆಗ ಬ್ರಹ್ಮದೇವರು ನಾರದರನ್ನು ಕುರಿತು – ಹೇ ವಿಷ್ಣುಭಕ್ತರಲ್ಲಿ ಶ್ರೇಷ್ಠನದ ನಾರದನೇ –
ಈ ಲೋಕದಲ್ಲಿ ಏಕಾದಶೀ ವ್ರತಕ್ಕಿಂತ ಶ್ರೇಷ್ಠವಾದ ಬೇರೊಂದು ಪವಿತ್ರವಾದ ವ್ರತವಿಲ್ಲ, ಆದುದರಿಂದ ಸರ್ವಪಾಪಗಳ ನಿವೃತ್ತಿಗಾಗಿ ಪ್ರಯತ್ನಪೂರ್ವಕ ಏಕಾದಶೀ  ವ್ರತವನ್ನು ಆಚರಿಸಬೇಕು. ಏಕಾದಶ್ಯಾಂ ವ್ರತಂ ಪುಣ್ಯಂ ಪಾಪಘ್ನಂ ಸರ್ವಕಾಮದಮ್ | ನ ಕೃತಂ ಯೈರ್ನರೈರ್ಲೋಕೇ ತೇ ನರಾ ನಿರಯೈಷಿಣಃ || ಪಾಪಗಳನ್ನು ನಾಶಮಾಡುವಂತಹ, ಸಕಲ ಕಾಮನೆಗಳನ್ನು ತಂದುಕೊಡುವಂತಹ ಏಕಾದಶೀ ಎಂಬ ಪುಣ್ಯವ್ರತವನ್ನು ಈ ಲೋಕದಲ್ಲಿ ಯರು ಆಚರಿಸುವುದಿಲ್ಲವೋ ಅವರು ನರಕವನ್ನು ಸೇರುತ್ತಾರೆ. ಹೀಗೆ ಏಕಾದಶೀ ಉಪವಾಸದ ಮಹತ್ವವನ್ನು ವರ್ಣಿಸಿ, ಪದ್ಮಾ ಎಂಬ ಹೆಸರುಳ್ಳ ಶ್ರೀಹರಿಯ
ಅತ್ಯಂತ ಪ್ರೀತಿಗೆ ಪಾತ್ರವಾದಂಥ ಈ ಏಕಾದಶಿಯ ಕುರಿತ ಪೌರಾಣಿಕವಾದ ಐತಿಹ್ಯವನ್ನು ಬ್ರಹ್ಮದೇವರು ಹೇಳಿದರು.

lord vishnu saakshatvಈ ಪುರಾಣ ಕಥಾಶ್ರವಣಮಾತ್ರದಿಂದ ಮಹಾಪಾಪಗಳು ನಾಶವಾಗಿ ಸದ್ಗತಿ ದೊರಕುತ್ತದೆ. ಹಿಂದೆ ಕೃತಯುಗದಲ್ಲಿ ವೈವಸ್ವತಮನುವಿನ ವಂಶದಲ್ಲಿ ಮಹಾದರ್ಮಿಷ್ಠನಾದ ಮಾಂಧಾತಾ ಎಂಬ ರಾಜನು ಚಕ್ರವರ್ತಿಯಾಗಿ ಭೂಮಿಯನ್ನು ಆಳುತ್ತಿದ್ದನು. ಮಹಾ ಪರಾಕ್ರಮಿಯು, ಸತ್ಯನಿಷ್ಠನು ಆದ ಆ ರಾಜರ್ಷಿಯು ತನ್ನ ಪ್ರಜೆಗಳನ್ನು ಮಕ್ಕಳ ಹಾಗೆ ಪಾಲಿಸುತ್ತಿದ್ದನು. ಅವನ ರಾಜ್ಯದಲ್ಲಿ ಪ್ರಜೆಗಳೆಲ್ಲ ನಿರಾತಂಕರಾಗಿ, ಧರ್ಮದಿಂದ ಸಮೃದ್ಧ ಜೀವನ ನಡೆಸುವವರಾಗಿದ್ದರು. ದುರ್ಭಿಕ್ಷೆಯಾಗಲಿ ಆಧಿವ್ಯಾಧಿಗಳ್ಯಾವವೂ ಅವನ ರಾಜ್ಯದಲ್ಲಿ ಇರಲಿಲ್ಲ. ಒಮ್ಮೆ ಮಾಂಧಾತಾ ರಾಜನ ರಾಜ್ಯದಲ್ಲಿ ವಿಧಿವಶಾತ್ ಎಂಬಂತೆ ಭಯಂಕರವಾದ ಮೂರು ವರ್ಷಗಳಷ್ಟು ದೀರ್ಘಕಾಲವಾದ ಬರಗಾಲ ಬಿದ್ದಿತು. ಮಳೆ-ಬೆಳೆಗಳಿಲ್ಲದೆ ಪ್ರಜೆಗಳಲ್ಲಿ ಹಾಹಾಕಾರ ಉಂಟಾಯಿತು. ಹಸಿವೆ ನೀರಡಿಕೆಯಿಂದ ಪೀಡಿತರಾಗಿ ಜನ ರಾಜನ ಮೊರೆ ಹೊಕ್ಕರು. ಹೇ ರಾಜನೇ –ಪರ್ಜನ್ಯರೂಪಿಯಾದ ಭಗವಾನ್ ವಿಷ್ಣುವು ಸದಾ ಸರ್ವತ್ರ ವ್ಯಾಪ್ತನಾಗಿರುವನು, ಅವನೇ ಮಳೆಯನ್ನು, ಮಳೆಯಿಂದ ಧಾನ್ಯಗಳನ್ನು ಮತ್ತು ಧಾನ್ಯಗಳಿಂದ ಪ್ರಜೆಗಳನ್ನು ಸೃಷ್ಟಿಮಾಡುವನು. ಮಳೆಯ ಅಭಾವದಿಂದ ಪ್ರಜೆಗಳ ನಾಶವಾಗುತ್ತಿರುವ ಕಾರಣ, ನೀನು ಏನಾದರೂ ಉಪಾಯವನ್ನು ಮಾಡು – ಎಂದು ಪ್ರಾರ್ಥಿಸಿಕೊಂಡರು. ಪ್ರಜಾಜನ ಪಾಲಕನಾದ ರಾಜನು ಈ ಕ್ಷೋಭೆಯಿಂದ ಪರಿಹಾರದ ಶೋಧನೆಗಾಗಿ ಋಷಿಮುನಿಗಳ ಆಶ್ರಮಗಳನ್ನು ಅರಸುತ್ತ ಅರಣ್ಯಕ್ಕೆ ತೆರಳಿದನು. ಒಂದು ಪ್ರದೇಶದಲ್ಲಿ ಅತ್ಯಂತ ತೇಜೋರಾಶಿಯಂತಿರುವ ಪ್ರತಿಬ್ರಹ್ಮನ ಹಾಗೆ ಹೊಳೆಯುತ್ತಿರುವ ಬ್ರಹ್ಮದೇವರ ಮಗನಾದ ಅಂಗೀರಸ ಮುನಿಗಳನ್ನು ನೋಡಿದನು. ಅವರಿಂದ ಅನುಗ್ರಹ  ಪಡೆಯಬೇಕೆಂದು ಇಚ್ಛಿಸಿ ಬಳಿಸಾರಿ ವಿನಯಪೂರ್ವಕವಾಗಿ ನಮಸ್ಕರಿಸಿ ನಿಂತುಕೊಂಡನು.
ಚಕ್ರವರ್ತಿಯು ತನ್ನ ರಾಜ್ಯದಲ್ಲಿ ಉಂಟಾದ ಪ್ರಕೃತಿ ವಿಕೋಪದ ವಿಷಯವನ್ನು ಅಂಗೀರಸರಿಗೆ ತಿಳಿಸಿ ಸಮಾಧಾನವನ್ನು ಹೇಳಬೇಕೆಂದು ಕೇಳಿಕೊಂಡನು.
ಋಷಿಗಳು, ಮಾಂಧಾತಾ ರಾಜನೇ – ಈ ಕೃತಯುಗವು ಯುಗಗಳಲ್ಲಿ ಶ್ರೇಷ್ಠವಾಗಿದೆ, ಈ ಯುಗದಲ್ಲಿ ಎಲ್ಲರೂ ಬ್ರಹ್ಮನನ್ನು ಕುರಿತು ಉಪಾಸನೆಯನ್ನು ಮಾಡುವುದರಿಂದ ಧರ್ಮವು ನಾಲ್ಕೂ ಚರಣಗಳಿಂದ ಯುಕ್ತವಾಗಿದೆ ಬ್ರಾಹ್ಮಣರು ಮಾತ್ರ ತಪವನ್ನಾಚರಿಸುವುದು ಈ  ಯುಗಧರ್ಮ, ಆದರೆ ಇದಕ್ಕೆ ವಿರುದ್ಧವಾಗಿ ನಿನ್ನ ರಾಜ್ಯದಲ್ಲಿ ವಿಧರ್ಮಿಯಾದ ವೃಷಲನೆಂಬ ಅಂತ್ಯಜನು ತಪಸ್ಸನ್ನಾಚರಿಸುತ್ತಿರುವುದು ಈ ಕ್ಷಾಮಕ್ಕೆ ಕಾರಣವಾಗಿದೆ. ಅವನ ನಿವಾರಣೆಯಾದರೆ ಕ್ಷಾಮ ಕಳೆದು ಪುನಃ ಸುಭೀಕ್ಷವುಂಟಾಗುತ್ತದೆ ಎಂದು ಹೇಳಿದರು. ರಾಜನು, ನಿರಪರಾಧಿಯಾದ ಮತ್ತು ತಪಸ್ಸನ್ನಾಚರಿಸುತ್ತಿರುವ ಅವನನ್ನು ತಾನು ನಿವಾರಿಸಲಾರೆ, ಆದ್ದರಿಂದ ಇನ್ನೇನಾದರೂ ಪರ್ಯಾಯ ಧರ್ಮೋಪಾಯವನ್ನು ತಿಳಿಸಬೇಕೆಂದು ಬೇಡಿಕೊಂಡನು. ರಾಜನ ಕ್ಷಮಾಗುಣ ಮತ್ತು ಧರ್ಮಬುದ್ಧಿಯಿಂದ ಅಂಗೀರಸರು ಪ್ರಸನ್ನರಾಗಿ ಹೇ ರಾಜನೇ ಆಷಾಢ ಮಾಸದ ಶುಕ್ಲಪಕ್ಷದಲ್ಲಿ ಬರುವ ಪದ್ಮಾನಾಮಕ ಏಕಾದಶಿಯ ವ್ರತವನ್ನು ನೀನು ಪರಿವಾರ ಪ್ರಜಾಸಹಿತ ಮಾಡುವೀಯಾದರೆ ಕ್ಷಾಮವು ನೀಗಿ ನಿನ್ನ ರಾಜ್ಯದಲ್ಲಿ ಮೊದಲಿನಂತೆ ಸುಭೀಕ್ಷ ಉಂಟಾಗುತ್ತದೆ, ಹೇಗೆಂದರೆ ಈ ಏಕಾದಶಿಯು – ಸರ್ವಸಿದ್ಧಿಪ್ರದಾ ಹ್ಯೇಷಾ ಸರ್ವೋಪದ್ರವನಾಶಿನೀ | ಸರ್ವಸಿದ್ಧಿಯನ್ನು ಕೊಡುವುದು ಮತ್ತು ಎಲ್ಲ ಉಪದ್ರವಗಳನ್ನು ನಾಶಮಾಡುವಂತಹದ್ದಾಗಿದೆ, ಆದ್ದರಿಂದ ನೀನು ಈ ವ್ರತವನ್ನು ಖಂಡಿತವಾಗಿ ಮಾಡು ಎಂದು ಉಪದೇಶವನ್ನು ಕೊಟ್ಟರು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಈ ಪ್ರಕಾರ ಅಂಗೀರಸರಿಂದ ಉಪದೇಶ ಪಡೆದವನಾಗಿ ರಾಜನು ತನ್ನ ರಾಜ್ಯಕ್ಕೆ ತೆರಳಿ, ಆಷಾಢ ಪ್ರಾಪ್ತವಾಗಲು ಸಮಸ್ತ ಪ್ರಜಾಜನ ಮತ್ತು ಪರಿವಾರ ಸಮೇತ ಈ ಏಕಾದಶೀ ವ್ರತವನ್ನು ಮಾಡಿದನು. ಶೀಘ್ರವಾಗಿ ವ್ರತಪ್ರಭಾವದಿಂದ ರಾಜ್ಯದಲ್ಲಿ ಸುವೃಷ್ಟಿಯಾಯಿತು ಮತ್ತು ಅವನ ರಾಜ್ಯ ಪುನಃ ಸಂಪದ್ಭರಿತವಾಯಿತು. ಈ ಕಾರಣದಿಂದಲೇ ಶ್ರೇಷ್ಠವಾದ ಈ ಪದ್ಮಾವ್ರತವನ್ನು ಆಚರಿಸಬೇಕು. ಈ ವ್ರತವು ಭುಕ್ತಿ ಮುಕ್ತಿ ಪ್ರದವೂ, ಜನರಿಗೆ ಸುಖದಾಯಕವೂ ಆಗಿದೆ. ಈ ವ್ರತದ ಮಹಾತ್ಮೆಯ ಪಠನ ಹಾಗೂ ಶ್ರವಣಗಳಿಂದ ಸರ್ವಪಾಪಗಳೂ ನಾಶವಾಗುತ್ತವೆ. ಇತಿ ಆಷಾಢ ಏಕಾದಶೀ ವ್ರತ ಮಾಹಾತ್ಮ್ಯಮ್.

ಏಕಾದಶಿವ್ರತವನ್ನುಮಾಡುವಪದ್ಧತಿ : ಮೊದಲನೆಯ ದಿನ ದಶಮಿಗೆ ಏಕಭುಕ್ತವಿರಬೇಕು. ಏಕಾದಶಿಯಂದು ಪ್ರಾತಃಸ್ನಾನ ಮಾಡಿ ತುಳಸಿಯನ್ನು ಅರ್ಪಿಸಿ ವಿಷ್ಣುವಿನ ಪೂಜೆಯನ್ನು ಮಾಡಬೇಕು. ಪೂರ್ಣದಿವಸ ಉಪವಾಸ ಮಾಡಬೇಕು. ರಾತ್ರಿ ಹರಿಭಜನೆಯೊಂದಿಗೆ ಜಾಗರಣೆ ಮಾಡಬೇಕು. ಆಷಾಢ ಶುಕ್ಲ ದ್ವಾದಶಿಗೆ ವಾಮನನನ್ನು ಪೂಜಿಸಿ ಪಾರಣೆ ಮಾಡಬೇಕು. ಈ ಎರಡೂ ದಿನಗಳಂದು ಶ್ರೀವಿಷ್ಣುವನ್ನು  ‘ಶ್ರೀಧರ’ ಎನ್ನುವ ಹೆಸರಿನಿಂದ ಪೂಜಿಸಿ ಉಪವಾಸ ಮಾಡಿ ಭಗವಂತನಿಗೆ ಪೂಜೆ ಮಾಡಿ ತುಳಸಿಯಿಂದ ಅರ್ಚಿಸಿ , ಮಾರನೇಯ ದಿನ ದ್ವಾದಶಿ. ಪಾರಣೆಮಾಡಿದರೆ ಎಲ್ಲ ಕಷ್ಟಗಳೂ ಪರಿಹಾರವಾಗುವುದು
. ವಿಷ್ಣು ಲೋಕ ಪ್ರಾಪ್ತಿಯಾಗುವದು

Tags: #astrologybengalurudaily astrologyEkadashihoroscopehoroscope-todaykarnatakaPandit Jnaneshwar Rao
ShareTweetSendShare
Join us on:

Related Posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram