ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D Revanna) ಅವರ ಆಪ್ತ ಅಶ್ವಥ್ ನಾರಾಯಣ್ ಗೌಡ ಕಿಡ್ನಾಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಐಎಸ್ಡಿ ಇನ್ಸ್ಪೆಕ್ಟರ್ (Inspector) ಅಶೋಕ್ ಭೂಗತ ಪಾತಕಿ ಬಾಂಬೆ ರವಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಸಂಶಯವೊಂದು ಕೇಳಿ ಬಂದಿದೆ.
ಬಾಂಬೆ ರವಿ ಹಾಗೂ ಆತನ ಸಹಚರರನ್ನು ಬಳಸಿಕೊಂಡು ಹಫ್ತಾ ವಸೂಲಿ, ಬಡ್ಡಿ ವ್ಯವಹಾರ, ಬೆದರಿಕೆ ಹಾಕುತ್ತಿದ್ದ ಆರೋಪ ಇನ್ಸ್ ಪೆಕ್ಟರ್ ಅಶೋಕ್ ವಿರುದ್ಧ ಕೇಳಿ ಬಂದಿದೆ. ಕಿಡ್ನಾಪ್ ಯತ್ನ ವಿಷಯದಲ್ಲಿ ಲೋಕೇಶನ್ ಸೇರಿದಂತೆ ಹಲವು ವಿಚಾರಗಳಲ್ಲಿ ಇನ್ಸ್ಪೆಕ್ಟರ್ ಸಹಾಯ ಮಾಡಿದ್ದ ಎಂಬ ಆರೋಪ ಕೇಳಿ ಬಂದಿದೆ.
ಅಲ್ಲದೇ ನಿರ್ಮಾಪಕ ಉಮಾಪತಿ ಗೌಡ, ಉದ್ಯಮಿ ದೀಪಕ್ ಗೌಡ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿಯೂ ಇವರ ಕುರಿತು ಸಂಶಯ ಮೂಡುತ್ತಿದೆ. ಉಮಾಪತಿ ಗೌಡ ಕೇಸಲ್ಲಿ ಅರೆಸ್ಟ್ ಆಗಿದ್ದ ರೌಡಿ ಶೀಟರ್ ಸಂತು ಹಾಗೂ ಕರಿಯಾ ರಾಜೇಶ್ ಆರೋಪಿ ಅಶೋಕ್ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ, ಸ್ಟೇಟಸ್ ಹಾಕಿದ್ದರು ಎನ್ನಲಾಗಿದೆ. ಸದ್ಯ ತನಿಖೆ ನಡೆಯುತ್ತಿದ್ದು, ಸತ್ಯ ಸಂಗತಿ ಬಯಲಿಗೆ ಬರಲಿದೆ.