ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Arvind kejriwal: ಪಂಜಾಬ್ ಗದ್ದುಗೆ ಏರಲು ಆಪ್ ಹೆಣೆದಿರುವ ತಂತ್ರವಾದರು ಏನು?

Vivek Biradar by Vivek Biradar
March 13, 2022
in Marjala Manthana, Newsbeat, ಮಾರ್ಜಲ ಮಂಥನ
Arvind Kejriwal Saaksha Tv
Share on FacebookShare on TwitterShare on WhatsappShare on Telegram

ಪಂಜಾಬ್ ಗದ್ದುಗೆ ಏರಲು ಆಪ್ ಹೆಣೆದಿರುವ ತಂತ್ರವಾದರು ಏನು? – Saaksha Tv

ಪಂಜಾಬ್ : ಪಂಚರಾಜ್ಯಗಳಲ್ಲಿ (ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ, ಮಣಿಪುರ) ರಾಜ್ಯಗಳಲ್ಲಿ ಮೂರು ತಿಂಗಳ ಕಾಲ ಬರಪೂರ ಚುನಾವಣೆಯ ಪ್ರಚಾರದ ನಂತರ ಮತದಾನ ನಡೆದು ಗುರುವಾರ 10 ರಂದು ಪಂಚರಾಜ್ಯಗಳಲ್ಲಿ ಫಲಿತಾಂಶ ಪ್ರಕಟಗೊಂಡಿತು. ಈ ಫಲಿತಾಂಶದಲ್ಲಿ 4 ರಲ್ಲಿ ಬಿಜೆಪಿ ಮತ್ತು 1 ರಲ್ಲಿ ಆಮ್ ಆದ್ಮಿ ಪಾರ್ಟಿ ಜಯಗಳಿಸಿತು.

Related posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

August 14, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026

ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ದಲ್ಲಿ ಬಿಜೆಪಿ ಜಯಗಳಿಸಿದರೆ, ಪಂಜಾಬ್ ನಲ್ಲಿ ಆಪ್ 92 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಪಾದಾರ್ಪಣೆ ಮಾಡಿತು. ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿದ್ದ ಆಪ್ ಪಂಜಾಬ್ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲವು ಸಾಧಿಸಲು ಕಾರಣವೇನು? ಚುನಾವಣಾ ರ್ಯಾಲಿಯಲ್ಲಿ ಯಾವ ಸ್ಟ್ಯಾಟರ್ಜಿ ವರ್ಕ್ ಆಯಿತು? ಆಪ್ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರ ಯಾವ ಐಡಿಯಾ ವರ್ಕ್ ಆಯಿತು ನೋಡೊಣಾ.

ಪಂಜಾಬ್ ಚುನಾವಣೆಕಿಂತ ಮುಂಚೆ ಸ್ವಲ್ಪ ಹಿಂದೆ ಹೋಗೋಣಾ ಅದು 7-8 ವರ್ಷಗಳ ಹಿಂದ 2014ರ ಲೋಕಸಭಾ ಚುನಾವಣಾ ಸಮಯ, ಆಗ ಗುಜರಾತ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಯಿತು. ಯಾವಾಗ ಮೋದಿ ಪ್ರಧಾನಿ ಅಭ್ಯರ್ಥಿ ಅಂತ ಬಿಜೆಪಿ ಘೋಷಣೆ ಮಾಡಿತು ಆಗ ದೇಶದ ತುಂಬೆಲ್ಲ ಬಿಜಪಿ ಒಂದೇ ಘೋಷ ವಾಖ್ಯದೊಂದಿಗೆ ಚುನಾವಣಾ ಪ್ರಚಾರ  ಮಾಡಲು ಶುರು ಹಚ್ಚಿಕೊಂಡಿತು. ಅದು “ಗುಜರಾತ್ ಮೊಡಲ್”  ಈ ಒಂದೇ ಸ್ಲೋಗನ್ ನಿಂದ ಮೋದಿಯವರು ಪ್ರಧಾನಿಯಾಗಿದ್ದು ಆಯಿತು ಅದು ಇತಿಹಾಸ.

ಇದೇ ಸ್ಟ್ಯಾಟರ್ಜಿಯನ್ನು ಅರವಿಂದ ಕೇಜ್ರಿವಾಲ್  ಪಂಜಾಬ್ ನಲ್ಲಿ ಉಪಯೋಗಿದ್ದಾರೆ. ಅದು ದೆಹಲಿ ಮೊಡಲ್. ಏನಿದು ದೆಹಲಿ ಮೊಡಲ್ ಅಂತಹ ಮಹತ್ತ ಕಾರ್ಯಗಳನ್ನು ಕೇಜ್ರಿವಾಲ್ ದೆಹಲಿಯಲ್ಲಿ ಮಾಡಿದ್ದಾದರು ಏನು. ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಮುಖ್ಯವಾಗಿ ಶಿಕ್ಷಣ, ನೀರು ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ. ಈ ಮೂರು ಕ್ಷೇತ್ರಗಳಲ್ಲಿ ಅನೇಕ ಸುಧಾರಣೆಗಳನ್ನು ಮಾಡುವ ಮುಖಾಂತರ ಜನಮನ್ನಣೆ ಪಡೆದರು. ಇದೇ ಅವರ ಪಕ್ಷದ ಅಜೆಂಡ ಕೂಡಾ ಆಗಿತ್ತು.

ಕೇಜ್ರಿವಾಲ್ ತಮ್ಮ ಪ್ರತಿ ಬಜೆಟ್ ನಲ್ಲು ಶಿಕ್ಷಣಕ್ಕಾಗಿ ಗರಿಷ್ಠ ಪಾಲನ್ನು ನೀಡುತ್ತಾರೆ. ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಿಗೆ ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು 20,000 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹೊಸ ಕೌಶಲ್ಯಗಳನ್ನು ಕಲಿಸಲು ಹೊಸ ಪಠ್ಯಕ್ರಮಗಳನ್ನು ಪ್ರಾರಂಭಿಸಿದ್ದಾರೆ. ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಇದರಿಂದ ಸಾಕಷ್ಟು ಮಕ್ಕಳು ಖಾಸಗಿ ಶಾಲೆ ತೊರೆದು ಸರಕಾರಿ ಶಾಲೆಗೆ ದಾಖಲಿಸಿಕೊಂಡಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ  ಪ್ರತಿ ನಗರಗಳಲ್ಲಿ ಮೊಹಲ್ಲಾ ಕ್ಲಿನಿಕ್‌ಗಳು, ಪಾಲಿಕ್ಲಿನಿಕ್‌ಗಳು ಮತ್ತು ಸರ್ಕಾರಿ ಆಸ್ಪತ್ರೆಗಳನ್ನು ಒಳಗೊಂಡ ಮೂರು ಹಂತದ ಆರೋಗ್ಯ ಭದ್ರತಾ ವಲಯವನ್ನು ನಿರ್ಮಿಸಿದ್ದಾರೆ.

ದೆಹಲಿ ಸರ್ಕಾರವು ‘ಲೈಫ್‌ಲೈನ್ ನೀರು ಸರಬರಾಜು’ — ಪ್ರತಿ ಮನೆಗೆ 20 ಕಿಲೋ ಲೀಟರ್‌ಗಳನ್ನು ಉಚಿತವಾಗಿ ನೀಡುತ್ತಿದೆ. ಹಾಗೂ 700 ಕ್ಕೂ ಹೆಚ್ಚು ಅನಧಿಕೃತ ಕಾಲೋನಿಗಳಲ್ಲಿ ಒಳಚರಂಡಿ ವ್ಯವಸ್ಥೆ ಮತ್ತು 1600 ಇತರ ಕಾಲೋನಿಗಳಿಗೆ ನೀರಿನ ಸಂಪರ್ಕವನ್ನು ಒದಗಿಸಿದೆ. ಇದೇ ರೀತಿಯಾಗಿ ಯಮುನಾ ಶುದ್ಧೀಕರಣ, ಉಚಿತ ವಿದ್ಯುತ್ ನೀಡಲಾಗಿದೆ. ಹೀಗೆ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ.

ಹಾಗೇ ಆಮ್ ಆದ್ಮಿ ಪಾರ್ಟಿಯು “ಬಾಬಾಸಾಹೇಬ್ ಡಾ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ವಿಜಾರಗಳನ್ನು ಮುಂದಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ. ಇದೇ ಯೋಜನೆಗಳನ್ನು ಪಂಜಾಬ್ ನಲ್ಲಿ ಅನುಷ್ಟಾನಕ್ಕೆ ತರಲು ಮುಂದಾಗಿದ್ದು, ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಈ ಯೋಜನೆಗಳನ್ನು ಹೇಳಿದೆ. ಅಲ್ಲದೇ ಕೃಷಿ ಮಸೂದೆ ಅಂಗಿಕಾರದ ವೀರೋಧದ ಹೋರಾಟದಲ್ಲು ರೈತರ ಪರವಾಗಿ ಕೈ ಜೋಡಿಸಿದೆ.

ಈ ಎಲ್ಲ ಕಾರಣಗಳಿಂದ  ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತ ಪೂರ್ವ ಜಯಗಳಿಸಲು ಸಾಧ್ಯವಾಆಯಿತು ಎನ್ನಬಹುದು. ಆದರೆ ಪಂಜಾಬ್ ಆಪ್ ದೆಹಲಿಯಷ್ಟು ಸುಲಭವಲ್ಲ ಎನ್ನುವುದು ಮರೆಯುವಂತ ಸಂಗತಿಯಲ್ಲ.

Tags: #Saaksha TVaapArvind Kejriwal
ShareTweetSendShare
Join us on:

Related Posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram