ವಾಟ್ಸಾಪ್ ನ ಹೊಸ ಗೌಪ್ಯತಾ ನೀತಿ ಭಾರತೀಯ ಐಟಿ ಕಾಯ್ದೆಯ ಉಲ್ಲಂಘನೆ ಎಂದ ಕೇಂದ್ರ
ನವದೆಹಲಿ : ವಾಟ್ಸಾಪ್ ನ ನೂತನ ಗೌಪ್ಯತಾ ನೀತಿ ಬಗ್ಗೆ ಅನೇಕ ಗೊಂದಲಗಳಿದೆ. ಖಾಸಗಿ ಮಾಹಿತಿಗಳ ಸೋರಿಕೆಯ ಭೀತಿಯಿದ್ದು, ಹಲವು ಬಳಕೆದಾರರು ವಾಟ್ಸಾಪ್ ನಿಂದ ದೂರ ಸರಿಯುವ ನಿರ್ಧಾರ ಮಾಡಿದ್ದಾರೆ..
ಇತ್ತ ಖಾಸಗಿತನ ಕುರಿತ ವಾಟ್ಸಾಪ್ ನ ನೂತನ ನೀತಿಯು ಭಾರತದ ಮಾಹಿತಿ ತಂತ್ರಜ್ಞಾನ (ಐ.ಟಿ) ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆಯಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ವಾಟ್ಸ್ಆ್ಯಪ್ ಜಾಲತಾಣ ಸಂಸ್ಥೆಗೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಸರ್ಕಾರ ದೆಹಲಿ ಕೋರ್ಟ್ಗೆ ಕೋರಿದೆ.
ಈ ನೀತಿಯು ವ್ಯಕ್ತಿಯ ಖಾಸಗಿತನದ ಹಕ್ಕು ಉಲ್ಲಂಘಿಸಲಿದೆ ಎಂಬುದರ ಬಗ್ಗೆ ತನ್ನ ಅಭಿಪ್ರಾಯವನ್ನು ದಾಖಲಿಸುವಂತೆ ಕೇಂದ್ರ, ಫೇಸ್ಬುಕ್ ಮತ್ತು ವಾಟ್ಸ್ ಆ್ಯಪ್ಗೆ ಹೈಕೋರ್ಟ್ ಪೀಠವು ನೋಟಿಸ್ ಜಾರಿ ಮಾಡಿದೆ.
ಮುಖ್ಯನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠದೆದುರು ಈ ನಿಲುವು ತಿಳಿಸಿದ ಕೇಂದ್ರ ಸರ್ಕಾರ, ಖಾಸಗಿತನ ನೀತಿಯು ಮೇ 15ರಿಂದ ಜಾರಿಗೆ ಬಂದಿದೆ ಎಂದು ಹೇಳಿದೆ. ವಾಟ್ಸಾಪ್ ನ ನೂತನ ನೀತಿಯನ್ನು ಪ್ರಶ್ನಿಸಿರುವ ವಿವಿಧ ಅರ್ಜಿಗಳ ವಿಚಾರಣೆಯನ್ನು ಈ ಪೀಠ ನಡೆಸುತ್ತಿದೆ. ಪೀಠಕ್ಕೆ ತನ್ನ ಅಭಿಪ್ರಾಯ ತಿಳಿಸಿದ ವಾಟ್ಸಾಪ್ ನೂತನ ನೀತಿಯು ಮೇ 15ರಿಂದ ಅನ್ವಯವಾಗುವಂತೆ ಜಾರಿಗೆ ಬಂದಿದೆ. ಆದರೆ ನೀತಿಯನ್ನು ಒಪ್ಪದ ಯಾವುದೇ ಬಳಕೆದಾರರ ಖಾತೆಗಳನ್ನು ನಾವು ತೆಗೆದುಹಾಕಿಲ್ಲ ಎಂದು ಸ್ಪಷ್ಟಪಡಿಸಿದೆ. ಆದ್ರೆ ಈ ಹಂತದಲ್ಲಿ ವಾಟ್ಸಾಪ್ ನ ಹೊಸ ನೀತಿ ದೇಶದ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.