ದೇಶದಲ್ಲಿ ಲೋಕಸಭೆ ಚುನಾವಣೆ ಸನಿಹಕ್ಕೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) 2024ರ ಲೋಕಸಭಾ ಚುನಾವಣೆಗೆ (Loka Sabha Election) ಸಿದ್ಧತೆ ನಡೆಸಿದ್ದಾರೆ. ಕಳೆದ ಎರಡು ಬಾರಿಯ ವಿಧಾನಸಭೆಯಿಂದ ಸ್ಪರ್ಧಿಸಿದ್ದ ಗೆದ್ದಿದ್ದ ಉತ್ತರ ಪ್ರದೇಶದ ಕಾಶಿಯ ಜೊತೆ ತಮಿಳುನಾಡಿನ (Tamil Nadu) ರಾಮನಾಥಪುರಂನಿಂದ (Ramanathapuram) ಕೂಡ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.
ಜುಲೈ 7 ರಂದು ಹೈದರಾಬಾದ್ ನಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳ ಬಿಜೆಪಿ ಸಭೆಯಲ್ಲಿ ಈ ವಿಷಯದ ಕುರಿತು ಚರ್ಚೆ ನಡೆದ ಕಾರಣ ಈ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಬಿಜೆಪಿ (BJP) ಸಂಘಟನಾ ಅನುಕೂಲಕ್ಕಾಗಿ ಮೂರು ವಲಯಗಳನ್ನಾಗಿ ವಿಂಗಡಿಸಿ ಸಭೆ ನಡೆಸುತ್ತಿದೆ.
ಉತ್ತರ, ದಕ್ಷಿಣ ಮತ್ತು ಪೂರ್ವ ವಲಯಗಳನ್ನಾಗಿ ಮಾಡಿದೆ. ದಕ್ಷಿಣ ರಾಜ್ಯದ ಸಭೆ ಜುಲೈ 9 ರಂದು ಹೈದರಾಬಾದ್ನಲ್ಲಿ ನಡೆದಿದೆ. ಕೇರಳ, ತಮಿಳುನಾಡು, ಪುದುಚೇರಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮುಂಬಯಿ, ಗೋವಾ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪಗಳ ಬಿಜೆಪಿ ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದರು.
ದಕ್ಷಿಣ ಭಾರತದಿಂದ ಮೋದಿ ಸ್ಪರ್ಧಿಸಿದರೆ ಪಕ್ಷಕ್ಕೆ ಅನುಕೂಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ದಕ್ಷಿಣದ ಪೈಕಿ ಮಹಾರಾಷ್ಟ್ರ, ಕರ್ನಾಟಕದಲ್ಲಿ ಬಿಜೆಪಿ ಈಗಾಗಲೇ ಅಧಿಕಾರ ನಡೆಸಿದೆ. ಅಧಿಕಾರ ನಡೆಸಿದ ತಮಿಳುನಾಡಿನಲ್ಲಿ ಸ್ಪರ್ಧಿಸಿದರೆ ಲೋಕಸಭೆಯ ಜೊತೆಗೆ ರಾಜ್ಯದ ವಿಧಾನಸಭಾ ಚುನಾವಣೆಗೆ ಲಾಭವಾಗಬಹುದು ಎಂಬ ಲೆಕ್ಕಾಚಾರ ಬಿಜೆಪಿ ನಾಯಕರದ್ದಾಗಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ತಮಿಳುನಾಡಿನಿಂದ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ.