ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ತನ್ನ ಕದಂಬ ಬಾಹುಗಳನ್ನು ಹೆಚ್ಚುತ್ತಿದೆ. ದಿನ ದಿಂದ ದಿನಕ್ಕೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಇದುವರೆಗೂ 88 ಜನರನ್ನು ಕೊರೊನಾ ಬಲಿ ಪಡೆದಿದೆ.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಜನ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದವರ ಶವ ಸಂಸ್ಕಾರಕ್ಕೆ ಜನ ಬರುತ್ತಿಲ್ಲ. ಜೊತೆಗೆ ಶವವನ್ನು ಮುಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಇದನ್ನು ಸರಿದೂಗಿಸಲು ರಾಜ್ಯ ಸರ್ಕಾರ ಬೇರೆ ರೀತಿ ಪ್ಲ್ಯಾನ್ ಮಾಡಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಈ ವಿಚಾರವಾಗಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬೆಂಗಳೂರು ಕೋವಿಡ್ ಉಸ್ತುವರಿ ಸಚಿವ ಆರ್.ಅಶೋಕ್, ಬೆಂಗಳೂರಿನಲ್ಲಿ ಪ್ರತಿ ಜೋನ್ ಗೆ ಎರಡು ಚಿರ ಶಾಂತಿ ವಾಹನ (ಶವ ವಾಹನ) ಅಯೋಜನೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.
ಸೋಂಕಿನಿಂದ ಮೃತಪಟ್ಟವರ ಶವವನ್ನು ಸಾಗಿಸಲು ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.