Siddaramaiah | ಅಸ್ಪೃಶ್ಯತೆ, ಅಸಮಾನತೆ ಬಗ್ಗೆ RSS ಯಾಕೆ ಮಾತನಾಡುತ್ತಿಲ್ಲ
ಬೆಂಗಳೂರು : ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಆರ್ ಎಸ್ ಎಸ್ ನ ಮೂಲ ಪ್ರಶ್ನಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ನಾಯಕರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ..
ಹಿಂದೂ ಧರ್ಮದೊಳಗಿನ ಅನಿಷ್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?
ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ?
ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ? 9/12#AryanRSS
— Siddaramaiah (@siddaramaiah) May 28, 2022
ಆರ್.ಎಸ್.ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ ಎಂದು ಸವಾಲ್ ಹಾಕಿದ್ದಾರೆ.
Why is the RSS not talking about Untouchability Inequality Siddaramaiah








