ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ರಾಹುಲ್ ಯಾಕಿಲ್ಲ..?

admin by admin
December 26, 2020
in Newsbeat, Sports, ಕ್ರೀಡೆ
team india saakshatv kl rahul
Share on FacebookShare on TwitterShare on WhatsappShare on Telegram

ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ರಾಹುಲ್ ಯಾಕಿಲ್ಲ..?

kl rahul team india saakshatvಕೆ.ಎಲ್. ರಾಹುಲ್..
ಕೆಲವು ವರ್ಷಗಳ ಹಿಂದೆ ಟೆಸ್ಟ್ ಕ್ರಿಕೆಟಿಗ ಅನ್ನೋ ಹಣೆಪಟ್ಟಿ ಪಡೆದಿದ್ದ ಆಟಗಾರ. ಆದ್ರೆ ಕ್ರಿಕೆಟ್ ಜಗತ್ತಿನಲ್ಲಿ ಆಗುತ್ತಿದ್ದ ಬದಲಾವಣೆಗೆ ತಕ್ಕಂತೆ ತನ್ನ ಬ್ಯಾಟಿಂಗ್ ಕಲೆಯನ್ನು ಸುಧಾರಿಸಿಕೊಂಡ್ರು. ಪರಿಣಾಮ ಮೂರು ಮಾದರಿಯ ಕ್ರಿಕೆಟ್ ನಲ್ಲೂ ಸೈ ಎನಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾ ಆಧಾರಸ್ತಂಭವಾಗುತ್ತಿರುವ ಕೆ.ಎಲ್. ರಾಹುಲ್ ಅವರ ಕಳೆದ ಎರಡು ವರ್ಷಗಳ ಸಾಧನೆ ಅಪ್ರತಿಮವಾಗಿದೆ. ಕಳೆದ ಐಪಿಎಲ್ ಟೂರ್ನಿಯಲ್ಲೂ ಮಿಂಚಿನ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಅಷ್ಟೇ ಅಲ್ಲ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಯಲ್ಲೂ ಗಮನ ಹರಿಸುವಂತಹ ಸಾಧನೆ ಮಾಡಿದ್ದರು.
ಆದ್ರೆ ಕೆ.ಎಲ್. ರಾಹುಲ್ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ರೂ 11ರ ಬಳಗದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಮೊದಲ ಟೆಸ್ಟ್ ನಲ್ಲಿ ಸ್ಥಾನ ಪಡೆಯದ ರಾಹುಲ್, ಎರಡನೇ ಟೆಸ್ಟ್ ನಲ್ಲಿ ಆಡುತ್ತಾರೆ ಅನ್ನೋ ನಿರೀಕ್ಷೆ ಇತ್ತು.
ಆದ್ರೆ ಬಾಕ್ಸಿಂಗ್ ಡೇ ಟೆಸ್ಟ್ ನಲ್ಲೂ ರಾಹುಲ್ ಗೆ ಸ್ಥಾನ ನೀಡಲಾಗಿಲ್ಲ. ಹೀಗಾಗಿ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ವಿರುದ್ಧ ಅಭಿಮಾನಿಗಳು ಸಾಮಾಜಿಕ ಜಾಲ ತಾಣದಲ್ಲಿ ಕಿಡಿ ಕಾರುತ್ತಿದ್ದಾರೆ.
ಅಷ್ಟಕ್ಕೂ ರಾಹುಲ್ ಅವರಿಗೆ 11ರ ಬಳಗದಲ್ಲಿ ಯಾಕೆ ಅವಕಾಶ ನೀಡಲ್ಲ ಅನ್ನೋ ಪ್ರಶ್ನೆಗೆ ಉತ್ತರ ನಿಗೂಢವಾಗಿದೆ. ಒಂದು ಕಡೆ ವಿರಾಟ್ ಕೊಹ್ಲಿ ಅನುಪಸ್ಥಿತಿ ಮತ್ತೊಂದೆಡೆ ಮೊದಲ ಟೆಸ್ಟ್ ಪಂದ್ಯ ಸೋಲು. ಇನ್ನೊಂದೆಡೆ ಸರಣಿಯಲ್ಲಿ ಅಂತರವನ್ನು ಸಮಗೊಳಿಸುವ ಸವಾಲು. ಹೀಗೆ ಟೀಮ್ ಇಂಡಿಯಾ ಸಂಕಷ್ಟದ ಪರಿಸ್ಥಿತಿಯಲ್ಲಿರುವಾಗ ಕೆ.ಎಲ್. ರಾಹುಲ್ 11ರ ಬಳಗದಲ್ಲಿರಬೇಕಿತ್ತು.
ಆದ್ರೆ ಅವಕಾಶ ನೀಡಿಲ್ಲ. ಯಾಕಂದ್ರೆ ರಾಹುಲ್ ಬದಲು ಇನಿಂಗ್ಸ್ ಆರಂಭಿಸುವುದಾದ್ರೆ ಶುಬ್ಮನ್ ಗಿಲ್ ಅವರನ್ನು ಹೊರಗಿಡಬೇಕಾಗಿತ್ತು. ಒಂದು ವೇಳೆ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡುವುದಾದ್ರೆ ಹನುಮ ವಿಹಾರಿಗೆ ಚಾನ್ಸ್ ಸಿಕ್ಕಿರಲಿಲ್ಲ. ಇಲ್ಲಿ ಟೀಮ್ ಮ್ಯಾನೇಜ್ ಮೆಂಟ್ ಆರಂಭಿಕನಾಗಿ ಶುಬ್ಮನ್ ಗಿಲ್‍ಗೆ ಚಾನ್ಸ್ ನೀಡಿದ್ರೆ, ಹನುಮ ವಿಹಾರಿಗೆ ಮಧ್ಯಮ ಕ್ರಮಾಂಕದಲ್ಲಿ ಅವಕಾಶ ನೀಡಲಾಗಿದೆ.
klrahul team india saakshatvಆದ್ರೂ ಹನುಮ ವಿಹಾರಿ ಬದಲು ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ಗೆ ಅವಕಾಶ ನೀಡಬಹುದಿತ್ತು. ಮೊದಲೇ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದಲ್ಲಿ ಅನುಭವಿ ಆಟಗಾರರ ಕೊರತೆ ಕಾಡುತ್ತಿದೆ. ಚೇತೇಶ್ವರ ಪೂಜಾರ ಮತ್ತು ನಾಯಕ ರಹಾನೆ ಮಾತ್ರ ನಂಬಿಕಸ್ಥ ಬ್ಯಾಟ್ಸ್ ಮೆನ್ ಗಳು. ಹೀಗಾಗಿ ಅನುಭವಿ ರಾಹುಲ್ ಗೆ ವಿಹಾರಿ ಬದಲು ಅವಕಾಶ ನೀಡಬಹುದಿತ್ತು. ಒಂದು ವೇಳೆ ಹನುಮ ವಿಹಾರಿಯವರನ್ನು ಆಡಿಸಲೇಬೇಕು ಅನ್ನೋದಾದ್ರೆ ವಿಕೆಟ್ ಕೀಪರ್ ರಿಷಬ್ ಪಂತ್ ಬದಲು ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ಆಗಿ ರಾಹುಲ್ ಅವರಿಗೆ ಚಾನ್ಸ್ ನೀಡಬಹುದಿತ್ತು.
ಆದ್ರೆ ಕೆ.ಎಲ್. ರಾಹುಲ್ ಅವರನ್ನು ಮೂರು ಮಾದರಿಯಲ್ಲೂ ಕಡೆಗಣಿಸಲಾಗಿದೆ. ಈಗಾಗಲೇ ಕ್ರಿಕೆಟ್ ಪಂಡಿತರು ಕೂಡ ರಾಹುಲ್ ಅವರನ್ನು ಕಡೆಗಣಿಸಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಈ ನಡುವೆ, ರಾಹುಲ್ 2018ರ ಆಸೀಸ್ ಸರಣಿಯಲ್ಲಿ ಅಷ್ಟೊಂದು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಇದು ಕಾರಣವಲ್ಲ. ಯಾಕಂದ್ರೆ ರಾಹುಲ್ ಕಳೆದ ಎರಡು ವರ್ಷಗಳಿಂದ ಸಾಕಷ್ಟು ಪಕ್ವಗೊಂಡಿದ್ದಾರೆ. ಸದ್ಯ ಅತ್ಯುತ್ತಮ ಫಾರ್ಮ್‍ನಲ್ಲೂ ಕೂಡ ಇದ್ದಾರೆ.
ಒಟ್ಟಿನಲ್ಲಿ ಕೋಚ್ ರವಿಶಾಸ್ತ್ರಿ ಮೈಂಡ್ ನಲ್ಲಿ ಏನಿದೆ ಎಂಬುದೇ ಗೊತ್ತಾಗುತ್ತಿಲ್ಲ. ಮಹತ್ವದ ಪಂದ್ಯದಲ್ಲಿ ರಾಹುಲ್ ನಂತಹ ಅನುಭವಿ ಆಟಗಾರರಿಗೆ ಅವಕಾಶ ನೀಡದಿರುವುದು ಸರಿಯಲ್ಲ.

Related posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

February 15, 2026
ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
Tags: #saakshatvaustreliaBoxing Day Testhanuma vihariIndian team managementk l rahulpantrahaneravi shasthriShubman Gillteam india
ShareTweetSendShare
Join us on:

Related Posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
February 15, 2026
0

ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ನಾವು ದಿನ ನಿತ್ಯ ದೇವರಿಗೆ ದೀಪ ಇಟ್ಟು, ಭಕ್ತಿಯಿಂದ ದೇವರಿಗೆ ಕೈ ಮುಗಿಯುತ್ತೇವೆ. ನಮ್ಮನ್ನು ಕುತೂಹಲದಿಂದ ನೋಡಿ ಕಲಿಯುವ ಮಕ್ಕಳು'...

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram