ಉಗ್ರಪ್ಪ ವಿರುದ್ಧ ಶಿವಕುಮಾರ್ ಕ್ರಮ ತೆಗೆದುಕೊಂಡಿಲ್ಲವೇಕೆ : ಬಿಜೆಪಿ Shivakumar saaksha tv
ಬೆಂಗಳೂರು : ಕೆಪಿಸಿಸಿ ಕಚೇರಿಯಲ್ಲೇ ನಡೆದ “ಪಿಸುಮಾತು” ಪ್ರಕರಣ ನಡೆದು ಅದೆಷ್ಟೋ ದಿನಗಳಾದರೂ ಪ್ರಕರಣದ ರೂವಾರಿ ಉಗ್ರಪ್ಪ ವಿರುದ್ಧ ಡಿ.ಕೆ.ಶಿವಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲವೇಕೆ ಎಂದು ಬಿಜೆಪಿ ಕುಟುಕಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ.. ಕೆಪಿಸಿಸಿ ಕಚೇರಿಯಲ್ಲೇ ನಡೆದ “ಪಿಸುಮಾತು” ಪ್ರಕರಣ ನಡೆದು ಅದೆಷ್ಟೋ ದಿನಗಳಾದರೂ ಪ್ರಕರಣದ ರೂವಾರಿ ಉಗ್ರಪ್ಪ ವಿರುದ್ಧ ಡಿ.ಕೆ.ಶಿವಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲವೇಕೆ?
ಉಗ್ರಪ್ಪ ಅವರು ಸಿದ್ದರಾಮಯ್ಯ ಬಣದವರೆಂಬ ಕಾರಣಕ್ಕೆ ಅಲ್ಪಸಂಖ್ಯಾತ ಸಮುದಾಯದ ಸಲೀಂ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳಲಾಯ್ತೇ ಎಂದು ಪ್ರಶ್ನಿಸಿದೆ.
ಇನ್ನು ಪರಿಷತ್ ಚುನಾವಣೆಯಲ್ಲಿ ಯಾರಾದರೂ ಬಂಡಾಯವಾಗಿ ಸ್ಪರ್ಧಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಎಚ್ಚರಿಸಿದ್ದಾರೆ.
ಆದರೆ ಡಿಕೆಶಿ ತಕ್ಕಡಿ ಎದ್ದೇಳುತ್ತಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲೇ ವ್ಯಂಗ್ಯವಾಡಿದ್ದ ಉಗ್ರಪ್ಪ ವಿರುದ್ಧ ಏಕೆ ಇನ್ನೂ ಕ್ರಮ ತೆಗೆದುಕೊಂಡಿಲ್ಲ? ಭಯವೋ, ಬೆದರಿಕೆಯೋ ಎಂದು ವ್ಯಂಗ್ಯವಾಡಿದೆ.