ಯಾದಗಿರಿ: ಕುಡಿಯಲು ಹಣ ನೀಡದಿದ್ದಕ್ಕೆ ಪತ್ನಿ ಕೊಲೆ ಮಾಡಿ ಬಿಡಿಸಲು ಬಂದ ಮಗನ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಮಲ್ಹಾರ್ ತಾಂಡದಲ್ಲಿ ನಡೆದಿದೆ.
ಸೋನಿಬಾಯಿ (48) ಕೊಲೆಯಾಗಿರುವ ಪತ್ನಿ, ಮಗ ಅರ್ಜುನ್(17) ಗಾಯಗೊಂಡವ. ಮಲ್ಯಾ ರಾಠೋಡ್ ಕೊಲೆ ಮಾಡಿರುವ ಆರೋಪಿ. ಮಲ್ಯಾ ಕುಡಿಯುವುದಕ್ಕಾಗಿ ರಾತ್ರಿ ವೇಳೆ ಹೆಂಡತಿ ಬಳಿ ಹಣ ಕೇಳಿದ್ದಾನೆ. ಆದರೆ, ಮಹಿಳೆ ನೀಡದಿದ್ದಾಗಿ ಇಬ್ಬರ ಮಧ್ಯೆ ಜಗಳವಾಗಿದೆ. ಈ ವೇಳೆ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಿಡಿಸಲು ಬಂದ ಮಗನ ಮೇಲೆಯೂ ಹಲ್ಲೆ ನಡೆಸಿದ್ದಾನೆ. ಪತ್ನಿ ಸಾಯುತ್ತದ್ದಂತೆ, ಮಗ ರಕ್ತದ ಮೊಡವಿನಲ್ಲಿ ಬಿದ್ದು ಒದ್ದಾಡಿದ್ದಾನೆ. ಆಗ ಮನೆಯ ಮುಂದಿನ ಮರಕ್ಕೆ ನೇಣು ಹಾಕಿಕೊಳ್ಳಲು ಹೋಗಿದ್ದಾನೆ. ಇದನ್ನು ಕಂಡ ಸ್ಥಳೀಯರು ರಕ್ಷಿಸಿದ್ದಾರೆ.
ಈ ವೇಳೆ ತನ್ನ ಮಗನೇ ತಾಯಿಯನ್ನು ಕೊಲೆ ಮಾಡಿ, ನನ್ನನ್ನು ಕೊಲೆ ಮಾಡಲು ಮುಂದಾಗಿದ್ದ. ನಾನು ತಪ್ಪಿಸಿಕೊಂಡಿದ್ದೇನೆ ಎಂದು ಹೇಳಿದ್ದಾನೆ. ನಂತರ ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಾಗ ಸತ್ಯ ಸಂಗತಿ ಬಯಲಿಗೆ ಬಂದಿದೆ. ಸದ್ಯ ಆರೋಪಿ ಮಲ್ಯ ರಾಠೋಡ್ ನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.