ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ದರ್ಶನ್ (Darshan) ನೋಡಲು ಪತ್ನಿ ವಿಜಯಲಕ್ಷ್ಮೀ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.
ಪತ್ನಿ ವಿಜಯಲಕ್ಷ್ಮೀ ಅವರು 9ನೇ ಬಾರಿಗೆ ಬಳ್ಳಾರಿ ಜೈಲಿಗೆ (Bellary Jail) ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಅವರೊಂದಿಗೆ ಮೈದುನ ದಿನಕರ್ ತೂಗುದೀಪ (Dinakar Thoogudeep) ಕೂಡ ಜೈಲಿಗೆ ಭೇಟಿ ನೀಡಿದ್ದಾರೆ.
ದರ್ಶನ್ ಸಲ್ಲಿಸಿದ್ದ ಬೇಲ್ ರಿಜೆಕ್ಟ್ ಆದ ನಂತರ ಮೊದಲ ಬಾರಿಗೆ ವಿಜಯಲಕ್ಷ್ಮಿ (Vijaylakshmi), ದಿನಕರ್, ಚಂದ್ರು, ಸುಶಾಂತ್ ನಾಯ್ಡು ಸೇರಿದಂತೆ 6 ಜನ ಜೈಲಿಗೆ ಆಗಮಿಸಿದ್ದಾರೆ.
ಬ್ಯಾಗ್ ಗಳಲ್ಲಿ ಬಟ್ಟೆ, ಡ್ರೈ ಫ್ರೂಟ್ಸ್, ಬೇಕರಿ ತಿನಿಸುಗಳನ್ನು ನಟಿ ತಂದಿದ್ದಾರೆ. ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಿರುವ ದರ್ಶನ್ಗೆ ಚಿಕಿತ್ಸೆಗೆ ಸಹಕರಿಸುವಂತೆ ಪತ್ನಿ ಮನವಿ ಮಾಡಿದ್ದಾರೆ. ಆ ನಂತರ ಕಾನೂನು ಸಮರದ ಕುರಿತು ಚರ್ಚೆ ನಡೆಸಿದ್ದಾರೆ.