ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡುವ ಸಾಧ್ಯತೆ ಇದೆ.
ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಯೋಜನೆ ನೀಡುವ ದೊಡ್ಡ ಸವಾಲು ಸಿದ್ದರಾಮಯ್ಯ ಮುಂದೆ ಇದ್ದು, ಬಜೆಟ್ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಲಿದೆ.
ಮದ್ಯದ ಮೇಲಿನ ಸುಂಕ ಏರಿಕೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ವಿಶೇಷ ಹಣ ಮೀಸಲು, ಬೆಂಗಳೂರಿನಲ್ಲಿ ಟನಲ್ ನಿರ್ಮಾಣಕ್ಕೆ ಅನುದಾನ, ಮೆಟ್ರೋ ಮಾರ್ಗ ವಿಸ್ತರಣೆ ಹೆಚ್ಚಿನ ಅನುದಾನ ಬಿಡುಗಡೆ ಸಾಧ್ಯತೆ, ಮೇಕೆದಾಟು ಯೋಜನೆಗೆ ಹಣ ಘೋಷಣೆ ಸಾಧ್ಯತೆ,100 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕಾರ್ಯ, ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಸಾಧ್ಯತೆ ಅಲ್ಲದೇ, ಚಿಕ್ಕೋಡಿ, ಗೋಕಾಕ್ ಸೇರಿದಂತೆ ಕೆಲವು ನೂತನ ಜಿಲ್ಲೆಗಳ ಘೋಷಣೆ ಸೇರಿದಂತೆ ಹಲವು ವಿಷಯಗಳಲ್ಲಿ ಜನರು ಕುತೂಹಲದಿಂದ ಕಾಯುತ್ತಿದ್ದಾರೆ.
ಐದು ಗ್ಯಾರಂಟಿ ಹಾಗೂ ಬರ ನಿರ್ವಹಣೆಗೆ ಹೆಚ್ಚಿನ ಹಣ ಹೊಂದಿಸುವ ಅನಿರ್ವಾಯತೆ ಇದೆ. ಸಾರ್ವಜನಿಕರಿಗೆ ಹೊರ ಹಾಕದೇ ಸಮತೋಲನ ಬಜೆಟ್ ಮಂಡಿಸುವ ಸವಾಲು ಸಿದ್ದರಾಮಯ್ಯ ಎದುರಿದೆ. ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಮೂಲಕ ಆದಾಯ ಕ್ರೋಢೀಕರಣಕ್ಕೆ ಸಿದ್ದರಾಮಯ್ಯ ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಹಲವು ಬಾರಿ ಮದ್ಯದ ದರ ಏರಿಕೆ ಮಾಡಲಾಗಿದ್ದು, ಕಳೆದ ಬಜೆಟ್ನಲ್ಲಿ ಹಾರ್ಡ್ ಲಿಕ್ಕರ್ ಬೆಲೆ ಶೇ.20ರಷ್ಟು ಏರಿಕೆಯಾಗಿತ್ತು. ಕಳೆದ ಬಜೆಟ್ನಲ್ಲಿ ಬಿಯರ್ ಸುಂಕ ಶೇ.185ಕ್ಕೆ ಏರಿಕೆಯಾಗಿತ್ತು. ಈ ಬಾರಿ ಕೂಡ ಮದ್ಯದ ಸುಂಕ ಹೆಚ್ಚಳವಾಗುವ ಸಾಧ್ಯತೆ ಇದೆ.