ನೂರಕ್ಕೆ ನೂರು ಬೈ ಎಲೆಕ್ಷನ್ ನಲ್ಲಿ ಗೆಲುವು ನಮ್ಮದೆ : ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ : ಮುಂಬರುವ ಎಲ್ಲಾ ಉಪಚುನವಾನೆಗಳಲ್ಲಿ ನೂರಕ್ಕೆ ನೂರರಷ್ಟು ನಾವೇ ಗೆಲ್ಲುತೇವೆ ಅಂತಾ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬೈ ಎಲೆಕ್ಷನ್ ಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಇನ್ನೇನು ಕೆಲವೇ ದಿನಗಳಲ್ಲಿ ಉಪಚುನಾವಣೆ ದಿನಾಂಕ ನಿಗದಿಯಾಗಲಿದೆ.
ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬೈ ಎಲೆಕ್ಷನ್ ಗಳಿಗಾಗಿ ಈಗಾಗಲೇ ಉಸ್ತುವಾರಿಗಳನ್ನ ನೇಮಕ ಮಾಡಲಾಗಿದೆ.
ನೂರಕ್ಕೆ ನೂರು ಎಲ್ಲಾ ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ. ಈ ಬಗ್ಗೆ ಯಾವುದೇ ಸಂಶಯಬೇಡ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ರು.
ಇನ್ನು ಬಜೆಟ್ ಬಗ್ಗೆ ಮಾತನಾಡಿ, ಮಾರ್ಚ್ 8 ರಂದು ಬಜೆಟ್ ಮಂಡಿಸಲಿದ್ದೇನೆ.
ಯಾವುದಕ್ಕೂ ಕೊರತೆ ಆಗದ ರೀತಿಯಲ್ಲಿ ಬಜೆಟ್ ಕೊಡುವ ಬಗ್ಗೆ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.