ಮಡಿಕೇರಿ: ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆ ಮೇಲಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಜೋರಾಗಿ ಬೀಳುತ್ತಿರುವ ಹಿನ್ನೆಲೆಯಲ್ಲಿ ಬಲಮುರಿ ಸೇತುವೆ ಬಳಿಯ ಕಾವೇರಿ ನದಿಗೆ ಮೈದುಂಬಿ ಹರಿಯುತ್ತಿದೆ. ಬಲಮುರಿ ಸೇತುವೆ ಬಳಿ ಬಂದ ಮಹಿಳೆ ಅಲ್ಲಿ ಯಾರೂ ಓಡಾಡದಿರುವುದನ್ನು ಗಮನಿಸಿದ್ದಾಳೆ. ಉಕ್ಕಿ ಹರಿಯುವ ಕಾವೇರಿ ನದಿಗೆ ಜಿಗಿಯಲು ಮುಂದಾಗುತ್ತಿದ್ದಂತೆ ಆಟೋ ಒಂದು ಬಂದು ಅಡ್ಡಿ ಉಂಟುಮಾಡಿದೆ. ಆದರೆ ಆಟೋ ಅಲ್ಲಿಂದ ತೆರಳುತ್ತಿದಂತೆ ದೇವರಿಗೆ ಕೈಮುಗಿದು ಮಹಿಳೆ ನೀರಿಗೆ ಜಿಗಿದಿದ್ದಾಳೆ.
ಈ ಸಂದರ್ಭ ಇಲ್ಲಿಗೆ ಸಮೀಪದಲ್ಲೇ ಮಳೆಗೆ ಆಶ್ರಯ ಪಡೆದಿದ್ದ ಯುವಕರು ಮಹಿಳೆಯ ಅನುಮಾನಾಸ್ಪದವಾಗಿದ್ದ ನಡೆಯ ಹಿನ್ನೆಲೆಯಲ್ಲಿ ತಮ್ಮ ಮೂಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದರು. ಆಗ ನೋಡನೋಡುತ್ತಿದ್ದಂತೆ ಮಹಿಳೆ ನೀರಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಯುವಕರು ಕಾವೇರಿ ನದಿಯ ನೀರಿನಲ್ಲಿ ಕೊಚ್ಚಿಕೊಂಂಡು ಹೋಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.ಸದ್ಯಕ್ಕೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅವರ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮಹಿಳೆ ಅತ್ಮಹತ್ಯೆ ಮಾಡಿಕೊಳಲ್ಲು ನಿರ್ಧಿಷ್ಟ ಕಾರಣ ತಿಳಿದುಬಂದಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.