ಗಂಡನ ಮನೆಯಲ್ಲಿ ಕಿರುಕುಳ : ನವವಿವಾಹಿತೆ ಆತ್ಮಹತ್ಯೆ vijayapura saaksha tv
ವಿಜಯಪುರ : ಗಂಡನ ಮನೆಯ ಕಿರುಕುಳ ತಾಳಲಾರದೇ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಅರಸನಾಳ ಗ್ರಾಮದಲ್ಲಿ ನಡೆದಿದೆ.
20 ವರ್ಷದ ಲಕ್ಷ್ಮೀ ಶಿವಪುತ್ರಪ್ಪ ಬೆಳ್ಳಿಕಟ್ಟಿ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ.
ಲಕ್ಷ್ಮಿ ಅವರು 6 ತಿಂಗಳ ಹಿಂದೆ ಬಾಗಲಕೋಟ ಜಿಲ್ಲೆ ರಾಂಪೂರದ ಶೇಕಪ್ಪ ಕಾಖಂಡಕಿ ಎಂಬಾತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಆದ್ರೆ ಗಂಡನ ಮನೆಯಲ್ಲಿದ್ದ ಕಿರುಕುಳದಿಂದಾಗಿ ತವರು ಮನೆಗೆ ಬಂದಿದ್ದಳು.
ಮತ್ತೆ ಗಂಡನ ಮನೆಗೆ ಕಳಿಸಲು ತವರು ಮನೆಯವರು ಮುಂದಾದಾಗ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ಶವ ದೊರಕಿದ್ದು ಮರಣೋತ್ತರ ಪರೀಕ್ಷೆಗೆ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಗಿದೆ.