ಮಂಗಳೂರು: ಮಹಿಳೆಯೊಬ್ಬರು ಬಸ್ಸಿನಿಂದ ಕೈ ಜೈರಿ ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ (Mani, Dakshina Kannada) ಎಂಬಲ್ಲಿ ಈ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಸಾವನ್ನಪ್ಪಿದ ಮಹಿಳೆ ಎನ್ನಲಾಗಿದೆ. ಮಹಿಳೆ ಬಸ್ ನಿಂದ ಕೆಳಗೆ ಬಿದ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಗುವನ್ನು ಹಿಡಿದುಕೊಂಡು ಮಹಿಳೆಯೊಬ್ಬರು ಬಸ್ ಹತ್ತಿದ್ದರು. ಇದನ್ನು ಗಮನಿಸಿದ ರಾಧಾ ಅವರು ಮಹಿಳೆಗೆ ಸೀಟು ಬಿಟ್ಟುಕೊಟ್ಟಿದ್ದರು. ಆ ನಂತರ ಮುಂದಿನ ಬಾಗಿಲ ಬಳಿ ಬಸ್ಸಿನ ಸರಳು ಹಿಡಿದುಕೊಂಡು ನಿಂತಿದ್ದರು. ಈ ಸಂದರ್ಭದಲ್ಲಿ ಕೈ ಜಾರಿ ರಾಧಾ ಬಸ್ಸಿನಿಂದ ಹೊರಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಕುರಿತು ಬಸ್ ಚಾಲಕ, ನಿರ್ವಾಹಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.