ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ | ಬಯಲಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ
ಕೊಪ್ಪಳ : ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಮಿತಿಯೇ ಇಲ್ಲದಂತಾಗಿದೆ. ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಹಿಳೆ ಬಯಲಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.
ಈ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಅಂತಾ ತಿಳಿದು ಬಂದಿದೆ.
ಕನಕಗಿರಿ ತಾಲೂಕು ಗೌರಿಪುರ ಗ್ರಾಮದ ರಿಂದಮ್ಮ ಶರಣಪ್ಪ ಎಂಬ ಮಹಿಳೆಗೆ ಬೆಳ್ಳಂಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಕನಕಗಿರಿ ಆರೋಗ್ಯ ಕೇಂದ್ರಕ್ಕೆ ಅವರನ್ನ ಕರೆದುಕೊಂಡು ಬರಲಾಗಿದೆ. ಆದ್ರೆ ಅಲ್ಲಿನ ಸಿಬ್ಬಂದಿ ಆಸ್ಪತ್ರೆಯ ಸಮಯವಾಗಿಲ್ಲ ಅಂತಾ ಹೇಳಿ ಬಾಗಿಲು ತೆರೆಯದ ಹಿನ್ನೆಲ ಅಲ್ಲೇ ಆವರಣದಲ್ಲೇ ರಿಂದಮ್ಮ ಮಗುವಿಗೆ ಜನ್ಮ ನೀಡಿದ್ದಾರೆ.
ಇತ್ತ ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಧಾವಿಸಿದ್ದು, ಆಸ್ಪತ್ರೆ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.