ಬ್ಯಾಂಕ್ ಅಧಿಕಾರಿಗಳ ಕಣ್ಮುಂದೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ.!
ಮಂಗಳೂರು: ಮನೆ ಅಡವಿಟ್ಟು ಸಾಲ ಪಡೆದಿದ್ದ ಮಾಲೀಕರು, ಸಾಲ ತೀರಿಸಲಾಗದೇ ಕಷ್ಟದಲ್ಲಿದ್ದರು. ಈ ವೇಳೆ ಮನೆ ಮುಟ್ಟುಗೋಲು ಹಾಕಲಿಕ್ಕೆ ಬಂದ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮುಂದೆಯೇ ಮನೆಯಲ್ಲಿ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಚಾಮರಾಜನಗರ | ಬಂಡೀಪುರದಲ್ಲಿ ಬೆಂಕಿರೇಖೆ ನಿರ್ಮಾಣ
ಪುತ್ತೂರಿನ ಹಾರಾಡಿ ರೈಲ್ವೆ ಗೇಟ್ ಬಳಿಯ ನಿವಾಸಿಗಳಾದ ರಘುವೀರ್ ಪ್ರಭು, ಪುತ್ತೂರಿನ ಕೆನರಾ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದರು. ಸಾಲ ತೀರಿಸಲಾಗದ್ದರಿಂದ ಮನೆ ಮುಟ್ಟುಗೋಲಿಗೆ ಬ್ಯಾಂಕ್ ಅಧಿಕಾರಿಗಳು ಆಗಮಿಸಿದ್ದರು. ಇದರಿಂದಾಗಿ ಮರ್ಯಾದೆಗೆ ಹೆದರಿದ ರಘುವೀರ್ ಪ್ರಭು ಅವರ ಪತ್ನಿ ಪ್ರಾರ್ಥನಾ ಪ್ರಭು ಮನೆಯಲ್ಲಿ ಲಾಕ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಮಡಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ಧಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.