ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೊರೊನಾ ಹಾವಳಿ ಮುಂದುವರೆದಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿಯಿಂದಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 33 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಚಾಮರಾಜನಗರ ಸಮೀಪದ ಜಾಲಹಳ್ಳಿ ಹುಂಡಿ ಗ್ರಾಮದ 48 ವರ್ಷದ ಮಹಿಳೆ ಕೊರೊನಾ ಮಹಾಮಾರಿಯಿಂದಾಗಿ ಮೃತಪಟ್ಟಿದ್ದಾರೆ. ಇನ್ನೂ ಇಂದು ಒಟ್ಟು 37 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ 6ಕ್ಕೇರಿದೆ. ಮೃತ ಮಹಿಳೆಯ ಅಂತ್ಯಕ್ರಿಯೆಯನ್ನು ನಗರದ ಹೊರ ವಲಯದ ನಿಗದಿತ ಜಾಗದಲ್ಲಿ ನೆರವೇರಿಸಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 624ಕ್ಕೇರಿದೆ. ಇಲ್ಲಿಯ ವರೆಗೂ 406 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 211 ಸಕ್ರಿಯ ಕೇಸ್ ಗಳಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇರುವುದು ಜಿಲ್ಲೆಯ ಜನರ ಆತಂಕವನ್ನು ಹೆಚ್ಚಿಸಿದೆ.
ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...








