ಒಂದು ವಾರದ ಕಾಲ ವರ್ಕ್ ಫ್ರಂ ಹೋಮ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ತಕ್ಷಣದ ಕ್ರಮ ಅಗತ್ಯ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ ನಾಳೆಯ ಒಳಗೆ ವಾಯು ತುರ್ತು ಸಭೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿನೆ ನೀಡಿದೆ. ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಕುರಿತು ಇಂದು ವಿಚಾರಣೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್, ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳೊಂದಿಗೆ ಸಭೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಮಾಲಿನ್ಯ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚಿಸಿದೆ. ಅದೇ ರೀತಿ.. ಒಂದು ವಾರದವರೆಗೆ ಬೆಳೆ ತ್ಯಾಜ್ಯ ಸುಡುವುದನ್ನು ನಿಲ್ಲಿಸುವಂತೆ ರೈತರಲ್ಲಿ ಮನವಿ ಮಾಡಿದೆ. ದೆಹಲಿಯಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಒಂದು ವಾರ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡುವಂತೆಯೂ ನಿರ್ದೇಶಿಸಿದೆ.
ಇತ್ತ ಮತ್ತೊಮ್ಮೆ ಲಾಕ್ಡೌನ್ ಹೇರಲು ಸಿದ್ಧ ಎಂದು ದೆಹಲಿ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ಗೆ ವಿಶೇಷ ಅಫಿಡವಿಟ್ಗಳನ್ನು ಸಲ್ಲಿಸಿವೆ. ಆದರೆ, ದೆಹಲಿಯ ಜನರು ಬದುಕಲು ಹೆದರುತ್ತಿದ್ದಾರೆ ಎಂದು ಪೀಠ ಹೇಳಿದೆ.