ನಂಬಿ ಕೆಟ್ಟವರಿಲ್ಲಾ ಗುರುರಾಯರ : ಜಗ್ಗೇಶ್ ಟ್ವೀಟ್
ಬೆಂಗಳೂರು : ಪುತ್ರನ ಕಾರ್ ಅಪಘಾತದ ಕುರಿತು ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದು, ಗುರು ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ ಎಂದು ಹೇಳಿದ್ದಾರೆ.
ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್ ಗುರು ರಾಯರನ್ನು ಸ್ಮರಿಸಿದ್ದಾರೆ. ಟ್ವೀಟ್ ನಲ್ಲಿ ಜಗ್ಗೇಶ್, ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಮನೆಯಿಂದ ಹೋರ ಹೋಗಿದ್ದನು. ಪ್ರತಿಬಾರಿ ಅವನ ಇಷ್ಟದ ಬೆಂಗಳೂರು-ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಕಾರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ.
ರಾಯರು ನನ್ನ ಜೊತೆ ಸದಾ ಇರುತ್ತಾರೆ ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ, ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲಾ ಗುರುರಾಯರ ಎಂದು ಬರೆದುಕೊಂಡಿದ್ದಾರೆ.









