ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಡಿ ಕೋಟಾ, ಬ್ಲಾಕ್‍ಮೇಲ್ ಕೋಟಾ, ಮಠಾಧೀಶರಿಗೆ 83 ಕೋಟಿ..! ಬಿಎಸ್‍ವೈ ವಿರುದ್ಧ ಯತ್ನಾಳ್ ಬಾಂಬ್..?

Kariyappa N by Kariyappa N
January 13, 2021
in Newsbeat, Politics, Samagra karnataka
yatnal
Share on FacebookShare on TwitterShare on WhatsappShare on Telegram

                                               ಮಕರ ಸಂಕ್ರಮಣದಿಂದ ಬಿಎಸ್‍ವೈ ಅಂತ್ಯ ಆರಂಭ-ಯತ್ನಾಳ್
ವಿಜಯಪುರ: ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖುಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಟೀಕೆಗಳ ಸುರಿಮಳೆಗೈದಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಸಿಡಿ ತೋರಿಸಿ ಬ್ಲಾಕ್‍ಮೇಲೆ ಮಾಡಿದವರಿಗೆ, ಹಣ ನೀಡಿದವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

yatnal
ಬ್ಲಾಕ್‍ಮೇಲೆ ಮಾಡಿ ಮೂವರು ಸಚಿವರಾಗಿದ್ದಾರೆ. ಇನ್ನು ಕೆಲವರು ಸಿಡಿ ತೋರಿಸಿ, ಅಪಾರ ಪ್ರಮಾಣ ಹಣಕೊಟ್ಟು ಸಚಿವರಾಗಿದ್ದಾರೆ. ಈ ಮಕರ ಸಂಕ್ರಮಣದ ಉತ್ತರಾಯಣದ ಮೂಲಕ ಸಿಎಂ ಯಡಿಯೂರಪ್ಪ ಅವರ ಪತನ ಆರಂಭವಾಗಲಿದೆ ಎಂದು ಬಹಿರಂಗ ಸವಾಲು ಹಾಕಿದ ಯತ್ನಾಳ್, ನೈತಿಕತೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಸಿಡಿ ತೋರಿಸಿ ಮಂತ್ರಿಯಾಗಿದ್ದಾರೆ..!
ಇಂದು ಸಚಿವ ಸಂಪುಟ ಸೇರ್ಪಡೆಯಾದ ಕೆಲವರು ಸಿಡಿ ತೋರಿಸಿ ಸಚಿವರಾಗಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಪಡಿಸುವೆ. ಕೆಲವರು ಹಣ ನೀಡಿ, ಸಿಡಿ ತೋರಿಸಿ ಸಚಿವರಾಗಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಸಿಡಿ ಕೋಟಾ, ಬ್ಲಾಕ್ ಮೇಲ್ ಕೋಟಾ..
ಹಿಂದೆ ಜಿಲ್ಲಾವಾರು, ಜಾತಿವಾರು, ಪ್ರದೇಶಾವರು ಕೋಟಾದಡಿ ಸಚಿವ ಸ್ಥಾನ ಸಿಗುತ್ತಿತ್ತು. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ಸಿಡಿ ತೋರಿಸಿದವರಿಗೊಂದು ಕೋಟಾ, ಬ್ಲಾಕ್‍ಮೇಲೆ ಮಾಡಿದವರಿಗೊಂದು ಕೋಟಾ, ಹಣ ಕೊಟ್ಟವರಿಗೊಂದು ಕೋಟಾ ಎಂಬ ಹೊಸ ಸಂಪ್ರದಾಯ ಆರಂಭವಾಗಿದೆ ಎಂದು ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.

ಬಿಎಸ್‍ವೈ ಮುಗಿಸಲು ಸಂಚು ನಡೆಸಿದ್ದವರೇ ಸಚಿವರಾಗಿದ್ದಾರೆ..
ಇಂದು ಸಂಪುಟಕ್ಕೆ ಸೇರ್ಪಡೆಯಾದ ಇಬ್ಬರು ನೂತನ ಸಚಿವರು, ಒಬ್ಬ ರಾಜಕೀಯ ಕಾರ್ಯದರ್ಶಿ ಸೇರಿಕೊಂಡು ಯಡಿಯೂರಪ್ಪ ಅವರನ್ನು ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ.

bsy
ನಾಲ್ಕು ತಿಂಗಳ ಹಿಂದೆ ನನ್ನನ್ನು ಭೇಟಿಯಾಗಿದ್ದರು. ನಾವೆಲ್ಲ ಸೇರಿ ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡೋಣ. ನೀವಾರ ಮುಖ್ಯಮಂತ್ರಿಯಾಗಿ, ನಾನು ಆದರೂ ಮುಖ್ಯಮಂತ್ರಿ ಆಗ್ತೇನೆ. ನಾನು ನೂರಾರು ಕೋಟಿ ಖರ್ಚು ಮಾಡಲು ತಯಾರಿದ್ದೇನೆ ಎಂದು ನೆಲಮಂಗಲದ ಗೆಸ್ಟ್‍ಹೌಸ್‍ನಲ್ಲಿ ಸಭೆ ಮಾಡಿದ್ದರು. ಅಂದು ನನಗೆ ಆಶ್ಚರ್ಯ ಆಗಿತ್ತು, ರಕ್ತ ಸಂಬಂಧಿ ಮುಖಾಂತರ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಯಡಿಯೂರಪ್ಪ ಅರವನ್ನು ಕೆಳಗಿಳಿಸಲು ಸಂಚು ಮಾಡಿದವರೇ ಇಂದು ಸಚಿವರಾಗಿದ್ದಾರೆ ಎಂದು ಯತ್ನಾಳ್ ಬಹಿರಂಗಪಡಿಸಿದ್ದಾರೆ.
ಯಡಿಯೂರಪ್ಪ ಮತ್ತು ವಿಜಯೇಂದ್ರ ಕಾಂಗ್ರೆಸ್ ನಾಯಕರನ್ನು ಖರೀದಿ ಮಾಡಿದ್ದಾರೆ. ರಾಜ್ಯದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ಸತ್ತಿರುವುದಕ್ಕೆ ಇದೇ ಕಾರಣ. ಯಡಿಯೂರಪ್ಪ ಅವರಿಗೆ ವಿನಾಶ ಕಾಲೇ ವಿಪರೀತ ಬುದ್ದಿ ಎನ್ನುವಂತಾಗಿದೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.

ಯಡಿಯೂರಪ್ಪ ವಂಶಾಡಳಿತ ಕೊನೆಗೊಳ್ಳಲಿ..
ಪ್ರಧಾನಿ ನರೇಂದ್ರ ಅವರು ದೇಶದಲ್ಲಿ ವಂಶಾಡಳಿತ ಕೊನೆಗೊಳ್ಳಲಿ ಎಂದು ಸಂದೇಶ ನೀಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಯಡಿಯೂರಪ್ಪ ಅವರ ವಂಶಾಡಳಿತವೇ ನಡೆದಿದೆ. ಯಡಿಯೂರಪ್ಪ ಮನೆಯಲ್ಲಿ ಒಬ್ಬ ಸಿಎಂ, ಮತ್ತೊಬ್ಬ ಸಂಸದ, ಇನ್ನೊಬ್ಬ ಬಿಜೆಪಿ ಉಪಾಧ್ಯಕ್ಷ ಇದ್ದಾರೆ. ವಂಶಾಡಳಿತ ರಾಜಕಾರಣ ಕೊನೆಗೊಳ್ಳಬೇಕಾದರೆ ಅದು ಕರ್ನಾಟಕದಿಂದ, ಯಡಿಯೂರಪ್ಪ ಅವರ ಮನೆತನದಿಂದ ಅಂತ್ಯ ಮಾಡಬೇಕು. ಈ ಮೂಲಕ ದೇಶಕ್ಕೆ ಬಿಜೆಪಿ ಸಂದೇಶ ಕೊಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಆಗ್ರಹಿಸುತ್ತೇನೆ ಎಂದಿರುವ ಯತ್ನಾಳ್, ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳಿವೆ. ಹೀಗಾಗಿ ನೈತಿಕ ಹೊಣೆ ಹೊತ್ತು ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮೋದಿ, ಶಾ ವಿರುದ್ಧ ಹೋರಾಟಕ್ಕೆ ಮಠಾಧೀಶರಿಗೆ 83 ಕೋಟಿ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೀರಶೈವ-ಲಿಂಗಾಯತರನ್ನು ಎತ್ತಿಕಟ್ಟುವ ಯತ್ನ ನಡೆಸುತ್ತಿದ್ದಾರೆ. ವಾಸ್ತವವಾಗಿ ಯಡಿಯೂರಪ್ಪ ಹಿಂದೆ ಯಾವ ವೀರಶೈವ-ಲಿಂಗಾಯತರು ಇಲ್ಲ. ಒಂದು ವೇಳೆ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದರೆ ಅಮಿತ್ ಶಾ, ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಲು, ಹೋರಾಟ ನಡೆಸಲು ವೀರಶೈವ-ಲಿಂಗಾಯತ ಮಠಾಧೀಶರಿಗೆ 83 ಕೋಟಿ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Allegations of blackmailbBasanagowda Patil YatnalCabinet Expansionnew ministerss yadiyurappa
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram