ಡಬಲ್ ಎಂಜಿನ್ ಸರ್ಕಾರದಿಂದಲೇ ವಿಕಾಸ ಎಂದ `ಶಾ’
ಬೆಳಗಾವಿ: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಹಾಡಿಹೊಗಳಿದ್ದು, ಬಿಎಸ್ವೈ ಸಿಎಂ ಖುರ್ಚಿ ಭದ್ರವಾಯ್ತಾ ಎಂಬ ಚರ್ಚೆಗಳು ಶುರುವಾಗಿವೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಳಗಾವಿಯಲ್ಲಿ ನಡೆದ ಬಿಜೆಪಿಯ ಜನಸೇವಕ ಸಮಾವೇಶದ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಕೋವಿಡ್ ಸಂದರ್ಭದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಹಲವು ವರ್ಗದ ಜನರಿಗೆ ನೆರವಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಸರ್ಕಾರ ಚೆನ್ನಾಗಿ ನಿಭಾಯಿಸಿದೆ. ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ಮಾಡಿರುವುದು ಬಹಳ ಸಂತಸ ತಂದಿದೆ ಎಂದರು.
ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿ.ಎಸ್ ಸರ್ಕಾರ ಉತ್ತಮ ಕೆಲಸ ಮಾಡುತ್ತಿವೆ. ಇದು ಡಬಲ್ ಎಂಜಿನ್ ಸರ್ಕಾರ, ಡಬಲ್ ಎಂಜಿನ್ ಸರ್ಕಾರದಿಂದಲೇ ವಿಕಾಸ ಎಂದು ಅಮಿತ್ ಶಾ ಮೆಚ್ಚುಗೆ ಹಾಡಿ ಹೊಗಳಿದ್ದಾರೆ.
ಬಿಎಸ್ವೈ ನೇತೃತ್ವದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ. ಜನರಿಗೆ ನಾವು ಆಭಾರಿಯಾಗಿರಬೇಕು. ಮೋದಿ ಹಾಗೂ ನಾವು ಯಾವಾಗ ಕರ್ನಾಟಕಕ್ಕೆ ಬಂದಿದ್ದೇವೆಯೋ ಆಗೆಲ್ಲಾ ತುಂಬು ಪ್ರೀತಿಯನ್ನು ನೀಡಿದ್ದೀರಿ. ಹೀಗಾಗಿ ಬಹುಮತ ಪಡೆದು ಸ್ವತಂತ್ರ ಸರ್ಕಾರ ರಚನೆಯಾಗಿದೆ.
ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ದೇಶದ ಸುರಕ್ಷತೆ ಕಡೆಗಣಿಸಲಾಗಿತ್ತು. ನೀವು ಮೋದಿ ಸರ್ಕಾರ ತಂದಿರಿ. ಒಮ್ಮೆ ಸರ್ಜಿಕಲ್ ಸ್ಟ್ರೈಕ್ ಹಾಗೂ ಇನ್ನೊಮ್ಮೆ ಏರ್ ಸ್ಟ್ರೈಕ್ ಮಾಡಿ ಪಾಕಿಸ್ತಾನಕ್ಕೆ ಮೋದಿ ಸರ್ಕಾರ ಬುದ್ಧಿ ಕಲಿಸಿದೆ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಾಗಿದೆ. ಭವ್ಯ ಮಂದಿರ ತಲೆ ಎತ್ತಲಿದೆ. ಬಹು ವರ್ಷಗಳ ಕನಸು ಈಗ ನನಸಾಗುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಬಾಗಲಕೋಟೆ, ಬೆಂಗಳೂರಲ್ಲೂ ಬಿಎಸ್ವೈ ಆಡಳಿತಕ್ಕೆ ಅಮಿತ್ ಶಾ ಮೆಚ್ಚುಗೆ
ಕರ್ನಾಟಕದಲ್ಲೂ ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬಾಗಲಕೋಟೆಯಲ್ಲೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಾದಾಮಿಯಲ್ಲಿರುವ ಸಚಿವ ಮುರುಗೇಶ್ ನಿರಾಣಿ ಒಡೆತನದ ಕೇದಾರನಾಥ ಸಕ್ಕರೆ ಕಾರ್ಖಾನೆ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ ಅಮಿತ್ ಷಾ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳನ್ನ ತಿಳಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲೂ ಮಾತನಾಡಿದ್ದ ಅಮಿತ್ ಶಾ, ಯಡಿಯೂರಪ್ಪ ಸರ್ಕಾರದ ಆಡಳಿತವನ್ನು ಕೊಂಡಾಡಿದ್ದರು.
ಕಾಂಗ್ರೆಸ್ ಕೊಡುಗೆ ಏನು..ಪಟ್ಟಿ ಕೊಡಲಿ
ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸುತ್ತೇನೆ. ಸೋನಿಯಾ-ಮನಮೋಹನ್ ಸಿಂಗ್ ಸರ್ಕಾರ ಕರ್ನಾಟಕಕ್ಕೆ ಏನು ಕೊಟ್ಟಿತ್ತು? ಪಟ್ಟಿ ಬಿಡುಗಡೆ ಮಾಡಲಿ. ಎಷ್ಟು ಅನುದಾನ ನೀಡಿದ್ದಾರೆ. ಉತ್ತರ ಕೊಡಬೇಕಲ್ಲವೇ? ನಮ್ಮ ಸರ್ಕಾರ 2 ಲಕ್ಷ ಕೋಟಿಗೂ ಜಾಸ್ತಿ ಅನುದಾನ ನೀಡಿದೆ. ಅಲ್ಲಿ ಮೋದಿ ಇಲ್ಲಿ ಯಡಿಯೂರಪ್ಪ ಜೋಡಿ ಅಭಿವೃದ್ಧಿಗೆ ಟೊಂಕ ಕಟ್ಟಿ ನಿಂತಿದ್ದಾರೆ ಎಂದು ಅಮಿತ್ ಶಾ ಬಣ್ಣಿಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಬಿಎಸ್ವೈಗೆ ಬಂತಾ ಭೀಮ ಬಲ..!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಗಳು, ಸಂಪುಟ ವಿಸ್ತರಣೆ ವೇಳೆ ನಾಯಕತ್ವದ ವಿರುದ್ಧ ಕೇಳಿ ಬಂದಿರುವ ಕೂಗು, ಯತ್ನಾಳ್ ಸಿಡಿ ಬಾಂಬ್ ಇದೆಲ್ಲದರ ಹಿನ್ನೆಲೆಯಲ್ಲಿ, ಅಮಿತ್ ಶಾ ಅವರು ಯಡಿಯೂರಪ್ಪ ಅವರ ಆಡಳಿತದ ಕುರಿತು ಆಡಿರುವ ಮಾತುಗಳು ಪ್ರಾಮುಖ್ಯತೆ ಪಡೆದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel