ಕೋವಿಡ್ ಸಾವು-ನೋವುಗಳಿಗೆ ಯಡಿಯೂರಪ್ಪ ಜವಾಬ್ದಾರಿ : ವಾಟಾಳ್ Yeddyurappa
ಚಾಮರಾಜನಗರ : ಕೋವಿಡ್ ನ ನಿರಂತರ ಸಾವು ನೋವುಗಳಿಗೆ ಜವಾಬ್ದಾರಿಯನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಕೊರೊನಾ ಸೋಂಕಿತರು ಮೃತಪಟ್ಟಿರುವ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಸಾವುಗಳ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊತ್ತು ರಾಜೀನಾಮೆ ಕೊಡಬೇಕು.
ನಿರಂತರ ಸಾವು-ನೋವುಗಳ ಜವಾಬ್ದಾರಿಯನ್ನು ಯಡಿಯೂರಪ್ಪ ಹೊರಬೇಕು. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು.
ಅಷ್ಟೇ ಅಲ್ಲದೇ ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.