ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಗ್ಯಾಂಗ್ರೇಪ್ ಪ್ರಕರಣದಲ್ಲಿ ಮೃತಪಟ್ಟ ಸಂತ್ರಸ್ಥೆಯನ್ನು ರಾತ್ರೋರಾತ್ರಿ ಪೊಲೀಸರೇ ನೆರವೇರಿಸಿದ ಕ್ರಮವನ್ನು ಖಂಡಿಸಿರುವ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಯೋಗಿ ಆದಿತ್ಯನಾಥ್ ಅವರನ್ನು ಸಿಎಂ ಹುದ್ದೆಯಿಂದ ಹಿತ್ತುಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಗ್ಯಾಂಗ್ ರೇಪ್ನಿಂದ ಸಾವೀಗೀಡಾದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡಿಲ್ಲ. ದಲಿತ ಯುವತಿಯ ಹೆತ್ತವರನ್ನು ಗೋಳಾಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರ ಪ್ರದೇಶದ ಯಾವ ಹೆಣ್ಣು ಮಕ್ಕಳು ಸುರಕ್ಷಿತವಲ್ಲ. ಮೊದಲು ಅವರನ್ನು ಸಿಎಂ ಹುದ್ದೆಯಿಂದ ವಜಾ ಮಾಡಿ ಎಂದು ಸಿದ್ದರಾಮಯ್ಯ ಟ್ವಿಟರ್ನಲ್ಲಿ ಕಿಡಿ ಕಾರಿದ್ದಾರೆ.
ಯೋಗಿ ಆದಿತ್ಯನಾಥ್ರನ್ನು ಬೆಂಬಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಘಪರಿಹಾರ ಕೂಡ ಈ ಕೊಲೆಯ ಹೊಣೆಯನ್ನು ಹೊರಬೇಕಾಗುತ್ತದೆ. ಯೋಗಿಯನ್ನು ಕಿತ್ತು ಹಾಕಿ ಉತ್ತರ ಪ್ರದೇಶವನ್ನು ರಕ್ಷಿಸಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಹತ್ರಾಸ್ ನಡೆದ ಘಟನೆ ಭಯಾನಕ ರೀತಿಯಲ್ಲಿ ಅಂತ್ಯವಾಗಿದೆ. ಯೋಗಿ ಸರ್ಕಾರದಲ್ಲಿ ಇಂತಹ ಅನೇಕ ಭಯಾನಕ ಘಟನೆಗಳನ್ನು ನೋಡುತ್ತಿದ್ದೇವೆ. ಯೋಗಿ ಆದಿತ್ಯನಾಥ್ ಅವರು ಕೆಟ್ಟದ್ದನ್ನು ರಕ್ಷಿಸುವ, ಪ್ರೇರೇಪಿಸುವಂತಹ ಆಡಳಿತವನ್ನು ನಡೆಸುತ್ತಿದ್ದಾರೆ. ಇದು ಅತ್ಯಂತ ಕ್ರೂರ ಹಾಗೂ ಅಮಾನವೀಯ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಕೂಡ ಟ್ವಿಟರ್ನಲ್ಲಿ ಖಂಡಿಸಿದ್ದಾರೆ.
ಸಂಸ್ಕೃತಿಯ ರಕ್ಷಕರ ಮುಖವಾಡ ಹಾಕಿಕೊಂಡಿರುವ ಬಿಜೆಪಿ ನಾಯಕರಿಗೆ ದಲಿತ ಹುಡುಗಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕಣ್ಣಿಗೆ ಕಾಣಿಸುವುದಿಲ್ಲವೇ? ಇದೇನಾ ನೀವು ಜನರ ಮುಂದೆ ಪ್ರತಿಪಾದಿಸುತ್ತಿರುವ ಯೋಗಿ ಆದಿತ್ಯನಾಥ್ರ ಮಾದರಿ ರಾಜ್ಯ? ಅತ್ಯಾಚಾರಿಗಳ ರಾಜ್ಯ ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳನ್ನು ಕಾಪಾಡುವರ್ಯಾರು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.