ಪ್ರಾರ್ಥನಾ ಮಂದಿರದಲ್ಲಿ ಮಹಿಳೆಯೊಂದಿಗೆ ಯುವಕನ ಅನುಚಿತ ವರ್ತನೆ
ಮಂಗಳೂರು: ಯುವಕನೋರ್ವ ಪ್ರಾರ್ಥನಾ ಮಂದಿರದಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ (26) ಎಂಬಾತ ಮಹಿಳೆಯೊಂದಿಗೆ ಅನುಚಿತವಾಗಿ ಬಂಧಿಸಿದ್ದು, ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದರೆ.
ಏ.28ರಂದು ಮಂಗಳೂರಿನ ತೊಕ್ಕೊಟ್ಟುವಿನ ಪ್ರಾರ್ಥನಾ ಪ್ರಾರ್ಥನಾ ಮಂದಿರದಲ್ಲಿ ನಡೆಯುತ್ತಿದ್ದ ವಿಶೇಷ ಕಾರ್ಯಕ್ರಮಕ್ಕೆ ಮಹಿಳೆಯರು ಆಗಮಿಸಿದ್ದರು. ಈ ವೇಳೆ ಆರೋಪಿ ಸುಜಿತ್ ಅಕ್ರಮವಾಗಿ ಪ್ರವೇಶಿಸಿ, ಮಹಿಳೆಯರನ್ನು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದ ಎಂದು ದೂರಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.