ರಾಮನಗರ | ಪಾರ್ಟಿ ನೆಪದಲ್ಲಿ ಯುವಕನ ಕೊಲೆ ramanagar saaksha tv
ರಾಮನಗರ : ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಕೊಲೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಳಗುಂಬ ಬಳಿಯ ನೂತನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
26 ವರ್ಷದ ರಂಜಿತ್ ಕೊಲೆಯಾದ ಯುವಕನಾಗಿದ್ದು, ಈತ ಮೂಲತಃ ಬೆಂಗಳೂರಿನ ನಿವಾಸಿ ಎಂದು ಹೇಳಲಾಗುತ್ತಿದೆ.
ಕಳೆದ ರಾತ್ರಿ ನಡೆದಿರುವ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕುಮಾರ್ ಎಂಬುವರಿಗೆ ಸೇರಿದ ಮಾವಿನ ತೋಟದಲ್ಲಿ ಕೊಲೆ ನಡೆದಿದೆ.
ಕಳೆದ ರಾತ್ರಿ ಚನ್ನಪಟ್ಟಣದ ಕನ್ನಮಂಗಲ ಗ್ರಾಮಕ್ಕೆ ಹಬ್ಬಕ್ಕೆ ರಂಜಿತ್ ಹೋಗಿದ್ದು, ಅಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಈ ವೇಳೆ ರಂಜಿತ್, ಅಲ್ಲಿನ ಯುವಕನನ್ನು ಹೊಡೆದಿದ್ದಾನೆ.
ಈ ಹಿನ್ನೆಲೆಯಲ್ಲಿ ರಾಜಿಗೆಂದು ಕರೆದುಕೊಂಡು ಹೋಗಿ, ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.