ಭಾರತೀಯ ಯುವ ಕಾಂಗ್ರೆಸ್ ನ ಮೂರು ದಿನಗಳ ರಾಷ್ಟ್ರೀಯ ಸಮಾವೇಶ ಬೆಹ್ತರ್ ಭಾರತ್ ಕಿ ಬುನಿಯಾದ್ ಬುಧವಾರದಿಂದ ಮೂರು ದಿನಗಳವರೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರ್ ಸಾಗರ್ ಸಭಾಂಗಣದಲ್ಲಿ ನಡೆಯಲಿದೆ.
ಐವೈಸಿ ರಾಷ್ಟ್ರೀಯ ಉಸ್ತುವಾರಿ ಕೃಷ್ಣ ಅಲ್ಲಾವಾರು ಹಾಗೂ ರಾಷ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ದೇಶದಾದ್ಯಂತ 3 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಐವೈಸಿ ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ವರುಣ್ ಪಾಂಡೆ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜಸ್ಥಾನದ ಮಾಜಿ ಸಿಎಂ ಸಚಿನ್ ವೈಲಟ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್ ಭಾಗವಹಿಸಿದ್ದರು.