ಧಾರಾಕರ ಮಳೆ | ವಿದ್ಯುತ್ ತಂತಿ ತಗುಲಿ ಯುವಕ ಸಾವು
ಬೆಂಗಳೂರು: ಬುಧವಾರ ನಗರದಲ್ಲಿ ಸುರಿದ ಮಳೆಗೆ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೀಪಾಂಜಲಿ ನಗರದಲ್ಲಿ ನಡೆದಿದೆ.
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ವಸಂತ (21) ಮೃತ ದುರ್ದೈವಿ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧುವಾರ ಸಂಜೆ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಪರಿಣಾಮ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದೆ. ವೈರನಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಸಂತ್ ತೀವ್ರ ಅಸ್ವಸ್ಥನಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಬೆಸ್ಕಾಂ ನಿರ್ಲಕ್ಷ್ಯವೇ ಯುವಕನ ಸಾವಿಗೆ ಕಾರಣವೆಂದು ಆರೋಪಿಸಲಾಗಿದೆ.