ಪುನೀತ್ ಒಪ್ಪಿಕೊಂಡಿದ್ದ ಚಿತ್ರಕ್ಕೆ ಯುವ ರಾಜ್ ಕುಮಾರ್ ನಾಯಕ
ನಟ ಪುನೀತ್ ರಾಜ್ಕುಮಾರ್ ಅವರ ನಟನೆಗೆ ಸರಿಸಾಟಿ ಆಗಬಲ್ಲಂತಹ ಬೇರೊಬ್ಬ ನಟನನ್ನ ಹುಡುಕುವುದು ಕಷ್ಟ. ಚಿತ್ರರಂಗದಲ್ಲಿ ಇನ್ನೂ ಅನೇಕ ವರ್ಷಗಳ ಕಾಲ ನಟಿಸಬೇಕಿದ್ದ ಅವರು ನಮ್ಮನ್ನಲ್ಲಾ ಬೇಗನೇ ಬಿಟ್ಟು ಹೊರಟರು. ಪುನೀತ್ ರಾಜ್ಕುಮಾರ್ ಅವರು ಹೃದಯಾಘಾತದಿಂದ ನಿಧನರಾದ ಬಳಿಕ ಹಲವು ಸಿನಿಮಾಗಳು ಮಾತುಕಥೆಯ ಹಂತದಲ್ಲಿ. ಅನೇಕ ಪ್ರಾಜೆಕ್ಟ್ಗಳು ಅರ್ಧಕ್ಕೆ ನಿಂತಿವೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಜೊತೆ ಪುನೀತ್ ರಾಜ್ಕುಮಾರ್ ಅವರು ಇನ್ನೊಂದು ಹೊಸ ಸಿನಿಮಾ ಮಾಡಬೇಕಿತ್ತು. ಆದರೆ ಆ ಸಿನಿಮಾ ಸೆಟ್ಟೇರುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದರು. ಅಪ್ಪು ಮಾಡಬೇಕಿದ್ದ ಆ ಸಿನಿಮಾ ಬಗ್ಗೆ ಈಗ ಹೊಸ ಮಾಹಿತಿ ಹರಿದಾಡುತ್ತಿದೆ.
ಅಪ್ಪು ಮಾಡಬೇಕಿದ್ದ ಅದೇ ಕಥೆಯನ್ನು ಇಟ್ಟುಕೊಂಡು ಯುವ ರಾಜ್ಕುಮಾರ್ ಅವರಿಗೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡುತ್ತಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಪುನೀತ್ ರಾಜ್ಕುಮಾರ್ ಅವರಿಗಾಗಿ ಸಿದ್ಧಪಡಿಸಿದ್ದ ಕಥೆಯನ್ನು ಸ್ವಲ್ಪ ಬದಲಾವಣೆ ಮಾಡಿ, ಆ ಚಿತ್ರಕ್ಕೆ ಯುವ ರಾಜ್ಕುಮಾರ್ ಅವರನ್ನು ಹೀರೋ ಆಗಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ. ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರನಾದ ಯುವ ರಾಜ್ಕುಮಾರ್ ಅವರು ಈ ಸಿನಿಮಾದಲ್ಲಿ ನಟಿಸಿದರೆ ಸೂಕ್ತ ಎಂಬ ಅಭಿಪ್ರಾಯ ಅಪ್ಪು ಅಭಿಮಾನಿಗಳ ವಲಯದಲ್ಲೂ ಕೇಳಿಬಂದಿದೆ. ಹಾಗಾಗಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ದಟ್ಟವಾಗಿದೆ. ಆ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ನಿರ್ಮಾಣ ಮಾಡಲಿದೆ ಎನ್ನಲಾಗುತ್ತಿದೆ.
ಈ ಕುರಿತಂತೆ ಸಂತೋಷ್ ಆನಂದ್ ರಾಮ್ ಅವರಾಗಲಿ, ಯುವ ರಾಜ್ಕುಮಾರ್ ಅವರಾಗಲಿ ಅಥವಾ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯವರಾಗಲಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಸದ್ಯಕ್ಕಂತೂ ಇದು ಗಾಂಧಿನಗರದ ಗುಸುಗುಸು ಸುದ್ದಿ ಮಾತ್ರ.