ಆರ್ಥಿಕ ಸಂಕಷ್ಟದಲ್ಲಿ ರಾಜ್ಯದ 9 ಮೃಗಾಲಯಗಳು – ಸಹಾಯಕ್ಕಾಗಿ ಮೃಗಾಲಯದ ಪ್ರಾಧಿಕಾರದ ಮನವಿ
ಕೋವಿಡ್ 2ನೇ ಅಲೆ ಲಾಕ್ ಡೌನ್ ಪರಿಣಾಮದಿಂದಾಗಿ ರಾಜ್ಯದ ಮೃಗಾಲಯಗಳು ಸಂಕಷ್ಟಕ್ಕೆ ಸಲಿಕಿವೆ.. ಇಂತಹ ಸಂಕಷ್ಟದ ಸಮಯದಲ್ಲಿ ಉದ್ಯಮಿಗಳು, ಪ್ರಾಣಿಪ್ರಿಯರು, ಸ್ವಯಂ ಪ್ರೇರಣೆಯಿಂದ ಮೃಗಾಲಯಗಳಿಗೆ ಆರ್ಥಿಕ ನೆರವು ನೀಡಬೇಕು. ನೆರವು ನೀಡಿ, ಅವುಗಳನ್ನು ಉಳಿಸುವ ಕೆಲಸ ಮಾಡಬೇಕು ಎಂದು ಕರ್ನಾಟಕ ಮೃಗಾಲಯದ ಪ್ರಾಧಿಕಾರ ಮನವಿ ಮಾಡಿಕೊಂಡಿದೆ.
ರಾಜ್ಯದ ಸುಮಾರು 9 ಮೃಗಾಲಯಗಳು ಆರ್ಥಿಕ ಸಂಕಷ್ಕ್ಕೆ ಸಿಲುಕಿದ್ದು, ಮೃಗಾಲಯಗಳನ್ನು ಸಂಕಷ್ಟದಿಂದ ಪಾರು ಮಾಡುವುದಕ್ಕಾಗಿ ರಾಜ್ಯ ಮೃಗಾಲಯ ಪ್ರಾಧಿಕಾರವು ಮುಂದಾಗಿದೆ. ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನ, ಮೈಸೂರು ಝೂ, ಬನ್ನೇರುಘಟ್ಟ, ಗದಗ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಒಟ್ಟು ಒಂಬತ್ತು ಮೃಗಾಲಯಗಳಿವೆ.
ಮೈಸೂರು, ಬನ್ನೇರುಘಟ್ಟ ಮೃಗಾಲಯಗಳಿಗೆ ಬರುವ ಆದಾಯದಿಂದ ಇತರೆ ಮೃಗಾಲಯಗಳ ನಿರ್ವಹಣೆ ಕೂಡ ಮಾಡಲಾಗುತ್ತಿದೆ. ಆದರೆ, ಕೋವಿಡ್ನಿಂದ ಮೃಗಾಲಯಗಳು ಬಂದ್ ಆಗಿರುವುದರಿಂದ ಅವುಗಳ ಆದಾಯಕ್ಕೆ ಹೊಡೆತ ಬಿದ್ದಿದೆ. ಇನ್ನೂ ಮೃಗಾಲಯಗಳ ನಿರ್ವಹಣೆ, ಹೊರಗುತ್ತಿಗೆ ಮೇಲೆ ನೇಮಿಸಿಕೊಂಡ ಸಿಬ್ಬಂದಿಗೆ ವೇತನ ಪಾವತಿಸಲು ಆಗದ ಪರಿಸ್ಥಿತಿ ಎದುರಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.